ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಡು ರಸ್ತೆಯಲ್ಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ; ಪತಿ ಆತ್ಮಹತ್ಯೆಗೆ ಯತ್ನ

ಮಂಗಳವಾರ ರಾತ್ರಿ ಕುಳ್ಳಪ್ಪ ಗಾರ್ಡನ್​ನಲ್ಲಿರುವ ಸಂಬಂಧಿ ಮನೆಗೆ ದಂಪತಿ ಬಂದಿದ್ದರು. ರಾತ್ರಿ ಸಂಬಂಧಿಕರ ಮನೆಯಿಂದ ಹೊರಗೆ ಹೋಗಿದ್ದ ನಾಗರಾಜ್‌, ಮದ್ಯ ಸೇವಿಸಿ ವಾಪಸ್ ಬಂದಿದ್ದ. ಈ ವೇಳೆ ದಂಪತಿ ಮಧ್ಯೆ ಗಲಾಟೆ ನಡೆದಿದೆ.

ಬೆಂಗಳೂರು: ಶೀಲ ಶಂಕಿಸಿ ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿಯೊಬ್ಬ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜೀವನ್‌ ಬಿಮಾ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.‌

ಚೆಲ್ಲಘಟ್ಟದ ನಿವಾಸಿ ಸಂಗೀತಾ (30) ಹತ್ಯೆಯಾದ ಮಹಿಳೆಯಾಗಿದ್ದಾರೆ. ಕೃತ್ಯದ ಬಳಿಕ ಪತಿ ನಾಗರಾಜ್‌ (35) ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸಂಗೀತಾ ಅವರು ತರಕಾರಿ ವ್ಯಾಪಾರ ಮಾಡುತ್ತಿದ್ದರು. ಆರು ವರ್ಷಗಳ ಹಿಂದೆ ನಾಗರಾಜ್‌ ಅವರನ್ನು ಮದುವೆ ಆಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗುವಿದೆ.

ಮಂಗಳವಾರ ರಾತ್ರಿ ಕುಳ್ಳಪ್ಪ ಗಾರ್ಡನ್​ನಲ್ಲಿರುವ ಸಂಬಂಧಿ ಮನೆಗೆ ದಂಪತಿ ಬಂದಿದ್ದರು. ರಾತ್ರಿ ಸಂಬಂಧಿಕರ ಮನೆಯಿಂದ ಹೊರಗೆ ಹೋಗಿದ್ದ ನಾಗರಾಜ್‌, ಮದ್ಯ ಸೇವಿಸಿ ವಾಪಸ್ ಬಂದಿದ್ದ. ಈ ವೇಳೆ ದಂಪತಿ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ಹೋಗಿ ಪತ್ನಿಯನ್ನು ತಳ್ಳಿ ಕತ್ತು ಕೊಯ್ದು ಪತಿ ಕೊಲೆ ಮಾಡಿದ್ದಾನೆ.

ಬಳಿಕ ತಾನೂ ಕತ್ತು ಕೊಯ್ದುಕೊಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಆರೋಪಿಯನ್ನು ಸಂಬಂಧಿಕರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆ ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!

ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ

SCROLL FOR NEXT