ಮೃತ ರುದ್ರೇಶ್ Rudresh
ರಾಜ್ಯ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್ ಸುತ್ತ ಲಂಚಾವತಾರದ ಹುತ್ತ: ವರ್ಗಾವಣೆ ತಡೆಗೆ ಹಣ ನೀಡುವಂತೆ ಹೆಬ್ಬಾಳ್ಕರ್ PA ಒತ್ತಡ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಸೋಮು ದಾದವಾಡಿ ಅವರ ಮೂಲಕ ಬೆಳಗಾವಿ ತಹಶೀಲ್ದಾರ್ ಬಸರಾಜ್ ನಾಗರಾಲ್ ಅವರಿಗೆ ಬೆಳಗಾವಿಯಲ್ಲಿ ಎಸ್‌ಡಿಎ ಆಗಿ ಪೋಸ್ಟಿಂಗ್ ಮುಂದುವರಿಸಲು 2 ಲಕ್ಷ ರೂಪಾಯಿ ಲಂಚ ನೀಡಿದ್ದೇನೆ.

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (ಎಸ್‌ಡಿಎ) ರುದ್ರೇಶ್ ಯಾದವಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯಿಂದ ಹಲವು ಅಂಶಗಳು ಬಹಿರಂಗವಾಗುತ್ತಿವೆ.

ಯಾದವಣ್ಣನವರ್ ಮತ್ತು ವರದಿಗಾರರ ನಡುವೆ ಇತ್ತೀಚೆಗೆ ನಡೆದ ದೂರವಾಣಿ ಕರೆಯ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಸೋಮು ದಾದವಾಡಿ ಅವರ ಮೂಲಕ ಬೆಳಗಾವಿ ತಹಶೀಲ್ದಾರ್ ಬಸರಾಜ್ ನಾಗರಾಲ್ ಅವರಿಗೆ ಬೆಳಗಾವಿಯಲ್ಲಿ ಎಸ್‌ಡಿಎ ಆಗಿ ಪೋಸ್ಟಿಂಗ್ ಮುಂದುವರಿಸಲು 2 ಲಕ್ಷ ರೂಪಾಯಿ ಲಂಚ ನೀಡಿದ್ದೇನೆ ಎಂದು ಯಾದವಣ್ಣನವರ್ ಫೋನಿನಲ್ಲಿ ಮಾತನಾಡುವಾಗ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಕೆಲಸ ಮಾಡಿಕೊಡಲುತನಗೆ ಹೆಚ್ಚುವರಿಯಾಗಿ 50,000 ರೂ ನೀಡುವಂತೆ ಸೋಮು ಒತ್ತಡ ಹಾಕಿದ್ದ. ತಹಶೀಲ್ದಾರ್ ಕಚೇರಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದಿಂದ ಹತಾಶರಾದ ಯಾದವಣ್ಣನವರ್ ಅವರು ತಮ್ಮ ವರ್ಗಾವಣೆಯನ್ನು ತಡೆಯುವಂತೆ ಸುದ್ದಿ ವರದಿಗಾರರ ಬಳಿ ಸಹಾಯ ಕೇಳಿದ್ದರು ಎಂದು ತಿಳಿದು ಬಂದಿದೆ.

ಅವರ ಸಾವಿಗೆ ಮುನ್ನ ತಹಶೀಲ್ದಾರ್ ಕಚೇರಿಯಲ್ಲಿ 15 ಎಕರೆ ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಅಕ್ರಮವಾಗಿ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿದ್ದವು ಎಂದು ಮೂಲಗಳು ತಿಳಿಸಿವೆ. ಹೆಚ್ಚುವರಿಯಾಗಿ, ಕೆಲವು ಅಧಿಕಾರಿಗಳು ಅದರ ಮಾಲೀಕರು ಸತ್ತಿರುವ ಮತ್ತು ಕಾನೂನುಬದ್ಧ ಉತ್ತರಾಧಿಕಾರಿಗಳಿಲ್ಲದ ಆಸ್ತಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಕೆ.ಕೆ.ಕೊಪ್ಪ, ಹಲಗಾ ಹಾಗೂ ಬೆಳಗಾವಿಯ ಹೊರವಲಯದಲ್ಲಿರುವ ಈ ಆಸ್ತಿಗಳು ಅಕ್ರಮ ವರ್ಗಾವಣೆಗೆ ಗುರಿಯಾಗಿವೆ ಎಂದು ಹೇಳಲಾಗಿದೆ. ಯಾದವಣ್ಣನವರ್ ಅವರು ಈ ಅಕ್ರಮ ಚಟುವಟಿಕೆಗಳಲ್ಲಿ ಮೇಲಧಿಕಾರಿಗಳೊಂದಿಗೆ ಸಹಕರಿಸಲು ನಿರಾಕರಿಸಿದ್ದು, ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರನ್ನು ಸೌದತ್ತಿಗೆ ವರ್ಗಾಯಿಸಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಯಾದವಣ್ಣನವರ್ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾದವಣ್ಣನವರ್ ಅವರನ್ನು ಖುದ್ದಾಗಿ ಭೇಟಿಯಾಗದಿದ್ದರೂ, ತಮ್ಮ ಕ್ಷೇತ್ರದ ಕೆಲಸ ನಿರ್ವಹಿಸುವ ಅನೇಕ ಆಪ್ತ ಸಹಾಯಕರನ್ನು ಹೊಂದಿರುವುದು ಸಾಮಾನ್ಯವಾಗಿದೆ ಎಂದು ಹೇಳಿದರು.

"ಪೊಲೀಸರು ಈಗಾಗಲೇ ತಮ್ಮ ವಿಚಾರಣೆಯನ್ನು ಪ್ರಾರಂಭಿಸಿರುವುದರಿಂದ, ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ಅವರು ಹೇಳಿದರು. ಯಾದವಣ್ಣನವರ್ ಅವರ ಸಾವಿಗೆ ಸಂತಾಪ ಸೂಚಿಸಿದ್ದೇನೆ ಮತ್ತು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ, ಸತ್ಯವನ್ನು ಬಹಿರಂಗಪಡಿಸಲು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ಮಾಡುವಂತೆ ಒತ್ತಾಯಿಸಿದ್ದೇನೆ. ವೈರಲ್ ಆದ ಆಡಿಯೋ ರೆಕಾರ್ಡಿಂಗ್‌ನಲ್ಲಿ, ರುದ್ರೇಶ್ ಅವರೇ ಹಣ ವರ್ಗಾವಣೆ ವಿಚಾರದಲ್ಲಿ ನನ್ನ ಯಾವುದೇ ರೀತಿಯ ಕೈವಾಡವಿಲ್ಲ ಎಂದು ಹೇಳಿದ್ದಾರೆ, ಆದರೂ ಬಿಜೆಪಿಯವರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT