ಅಗ್ರಹಾರ ಕೃಷ್ಣಮೂರ್ತಿ, ರಂಜಾನ್‌ ದರ್ಗಾ, ಇಂದಿರಾ ಹೆಗ್ಗಡೆ (ಸಂಗ್ರಹ ಚಿತ್ರ) 
ರಾಜ್ಯ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿವಿಧ ಪ್ರಶಸ್ತಿಗೆ 15 ಸಾಹಿತಿಗಳು ಆಯ್ಕೆ

ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ.

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, 2022ನೆ ಸಾಲಿನ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಗೆ ಸಾಹಿತಿಗಳಾದ ಆರ್.ಕೆ.ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ, ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ,50 ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಬಾರಿ ಪ್ರಶಸ್ತಿಗಳಿಗೆ ವಿಭಾಗವಾರು ಸಾಹಿತಿಗಳನ್ನು ಗುರುತಿಸಿ, ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.

‘2022ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ.25 ಸಾವಿರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

2021ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 17 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ರೂ.25 ಸಾವಿರ ನಗದು ಬಹುಮಾನ ಒಳಗೊಂಡಿದೆ. 2021ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಡಿಸೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT