ಮುಡಾ ಕಚೇರಿ 
ರಾಜ್ಯ

50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ರದ್ದು: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ

ಇಂದು ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಡಾ ಸಭೆ ನಡೆಸಿದ್ದು, ಈ ಸಭೆಯಲ್ಲಿ 50:50 ನಿವೇಶನಗಳನ್ನು ರದ್ದು ಮಾಡಲು ಒಮ್ಮತದ ನಿರ್ಣಯ ಕೈಗೊಂಡಿದೆ.

ಇಂದು ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವರದಿ ಬಂದ ಬಳಿಕ ಜಪ್ತಿಯ ವರದಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಅಕ್ರಮವಾಗಿ 50:50 ಸೈಟ್ ಪಡೆದವರಿಗೆ ಸಂಕಷ್ಟ ಎದುರಾಗಿದೆ.

ಮುಡಾ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಜಿಟಿ ದೇವೇಗೌಡ ಅವರು, 50:50 ಅನುಪಾತದಡಿ ಮುಡಾ ಸೈಟ್ ಹಂಚಿಕೆ ಬಗ್ಗೆ ಲೋಕಾಯುಕ್ತ, ಇಡಿ, ದೇಸಾಯಿ ಆಯೋಗ ತನಿಖೆ ಮಾಡುತ್ತಿದೆ. 50:50 ಅನುಪಾತ ವಾಪಾಸ್ ಪಡೆಯಬೇಕು. 50:50 ಅಕ್ರಮವಾಗಿರೋದನ್ನ ರದ್ದು ಮಾಡಬೇಕು. ಕಾನೂನುನಾತ್ಮಕವಾಗಿ ಇರುವವರಿಗೆ ಸೈಟ್ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ. ಮೊದಲು ಆಯೋಗದ ತನಿಖಾ ವರದಿ ಬರಲಿ. ನಂತರ ನಿರ್ಧಾರ ಮಾಡೋಣ ಅನ್ನೋ ಒಮ್ಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕ ಕೆ.ಹರೀಶ್​ಗೌಡ ಮಾತನಾಡಿ, 50:50 ಅನುಪಾತದಡಿ ನೀಡಿರುವ ಸೈಟ್​​ ಜಪ್ತಿಗೆ ಸದಸ್ಯರ ಒಪ್ಪಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳೋಣ ಎಂದು ಅಧ್ಯಕ್ಷರು ಹೇಳಿದ್ದಾರೆ. ಮುಡಾ ಸ್ವಚ್ಛವಾಗಬೇಕು ಎಂಬುವುದೇ ಎಲ್ಲಾ ಸದಸ್ಯರ ಅಭಿಪ್ರಾಯ. 2020ರಿಂದ 50:50 ಅನುಪಾತದಡಿ ಸೈಟ್​ ಹಂಚಿಕೆ ಮಾಡಲಾಗಿದೆ. ಕೆಲವೆಡೆ ಪರಿಹಾರ ರೂಪದಲ್ಲೂ 50:50 ಅನುಪಾತದಡಿ ಸೈಟ್​ ಹಂಚಿಕೆ ಮಾಡಲಾಗಿದೆ. ಎಲ್ಲಾ ದಾಖಲೆಗಳನ್ನ ಇಟ್ಟುಕೊಂಡು‌ ಸಭೆಯಲ್ಲಿ ಮಾತನಾಡಿದ್ದೇನೆ. ಕಳೆದ ಬಾರಿ ನಡೆದ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡಲಾಗಿತ್ತು. ದಾಖಲೀಕರಣ ಮಾಡದ ಅಧಿಕಾರಿಗಳ ವಿರುದ್ಧ ಕೇಸ್​ ದಾಖಲಿಸಲು ನಿರ್ಧರಿಸಲಾಗಿದೆ. ಅಲ್ಲದೇ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೂ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT