ಮುಡಾ ಕಚೇರಿ 
ರಾಜ್ಯ

50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ರದ್ದು: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ

ಇಂದು ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಡಾ ಸಭೆ ನಡೆಸಿದ್ದು, ಈ ಸಭೆಯಲ್ಲಿ 50:50 ನಿವೇಶನಗಳನ್ನು ರದ್ದು ಮಾಡಲು ಒಮ್ಮತದ ನಿರ್ಣಯ ಕೈಗೊಂಡಿದೆ.

ಇಂದು ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವರದಿ ಬಂದ ಬಳಿಕ ಜಪ್ತಿಯ ವರದಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಅಕ್ರಮವಾಗಿ 50:50 ಸೈಟ್ ಪಡೆದವರಿಗೆ ಸಂಕಷ್ಟ ಎದುರಾಗಿದೆ.

ಮುಡಾ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಜಿಟಿ ದೇವೇಗೌಡ ಅವರು, 50:50 ಅನುಪಾತದಡಿ ಮುಡಾ ಸೈಟ್ ಹಂಚಿಕೆ ಬಗ್ಗೆ ಲೋಕಾಯುಕ್ತ, ಇಡಿ, ದೇಸಾಯಿ ಆಯೋಗ ತನಿಖೆ ಮಾಡುತ್ತಿದೆ. 50:50 ಅನುಪಾತ ವಾಪಾಸ್ ಪಡೆಯಬೇಕು. 50:50 ಅಕ್ರಮವಾಗಿರೋದನ್ನ ರದ್ದು ಮಾಡಬೇಕು. ಕಾನೂನುನಾತ್ಮಕವಾಗಿ ಇರುವವರಿಗೆ ಸೈಟ್ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ. ಮೊದಲು ಆಯೋಗದ ತನಿಖಾ ವರದಿ ಬರಲಿ. ನಂತರ ನಿರ್ಧಾರ ಮಾಡೋಣ ಅನ್ನೋ ಒಮ್ಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕ ಕೆ.ಹರೀಶ್​ಗೌಡ ಮಾತನಾಡಿ, 50:50 ಅನುಪಾತದಡಿ ನೀಡಿರುವ ಸೈಟ್​​ ಜಪ್ತಿಗೆ ಸದಸ್ಯರ ಒಪ್ಪಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳೋಣ ಎಂದು ಅಧ್ಯಕ್ಷರು ಹೇಳಿದ್ದಾರೆ. ಮುಡಾ ಸ್ವಚ್ಛವಾಗಬೇಕು ಎಂಬುವುದೇ ಎಲ್ಲಾ ಸದಸ್ಯರ ಅಭಿಪ್ರಾಯ. 2020ರಿಂದ 50:50 ಅನುಪಾತದಡಿ ಸೈಟ್​ ಹಂಚಿಕೆ ಮಾಡಲಾಗಿದೆ. ಕೆಲವೆಡೆ ಪರಿಹಾರ ರೂಪದಲ್ಲೂ 50:50 ಅನುಪಾತದಡಿ ಸೈಟ್​ ಹಂಚಿಕೆ ಮಾಡಲಾಗಿದೆ. ಎಲ್ಲಾ ದಾಖಲೆಗಳನ್ನ ಇಟ್ಟುಕೊಂಡು‌ ಸಭೆಯಲ್ಲಿ ಮಾತನಾಡಿದ್ದೇನೆ. ಕಳೆದ ಬಾರಿ ನಡೆದ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡಲಾಗಿತ್ತು. ದಾಖಲೀಕರಣ ಮಾಡದ ಅಧಿಕಾರಿಗಳ ವಿರುದ್ಧ ಕೇಸ್​ ದಾಖಲಿಸಲು ನಿರ್ಧರಿಸಲಾಗಿದೆ. ಅಲ್ಲದೇ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೂ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT