ಡಿ.ಕೆ ಶಿವಕುಮಾರ್ 
ರಾಜ್ಯ

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ; ರಾಜಕೀಯ ಉದ್ದೇಶದಿಂದ ರಾಜ್ಯಕ್ಕೆ ಜೆಪಿಸಿ ಭೇಟಿ: ಡಿ.ಕೆ ಶಿವಕುಮಾರ್

ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ತಿಳಿಸಿದರು.

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ.

ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ" ಎಂದರು.

ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಜೆಸಿಪಿ ರಾಜ್ಯಕ್ಕೆ ಭೇಟಿ ನೀಡುವುದಾದರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ಬಂದಿದ್ದಾರೆ ಎಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬೊಮ್ಮಾಯಿ ಹಾಗೂ ಸಚಿವ ಸೋಮಣ್ಣ ಅವರ ಜತೆ ಬಂದಿದ್ದಾರೆ. ಇವರಿಬ್ಬರು ಜೆಪಿಸಿ ಸದಸ್ಯರೇ? ಭೇಟಿ ನೀಡಿರುವವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ" ಎಂದು ತಿಳಿಸಿದರು.

ಶಿವಕುಮಾರ್ ಮುಂದೆ ಯಾಕೆ ತಗ್ಗಿಬಗ್ಗಿ ನಡೆಯಬೇಕು ಎಂಬ ಆರ್.ಅಶೋಕ್ ಅವರ ಟ್ವೀಟ್ ಬಗ್ಗೆ ಕೇಳಿದಾಗ, "ನಾನು ಅವರ ವಿಚಾರ ಮಾತನಾಡಿಲ್ಲ. ನಾನು ಜಯನಗರ ಕ್ಷೇತ್ರದ ಅನುದಾನ ವಿಚಾರವಾಗಿ ಸಂಸದ ಸೂರ್ಯ ಅವರ ಜತೆ ಚರ್ಚೆ ಮಾಡಿದ್ದೇನೆ. ಅಲ್ಲಿನ ಶಾಸಕರು ನಾನು ಸಚಿವನಾದ ನಂತರ ಬೆಂಗಳೂರು ಅಧೋಗತಿಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ಎಲ್ಲಿ ಅಧೋಗತಿಯಾಗಿದೆ? ಇದೇ ಅಶೋಕ್ ಅವರು ಸಂವಿಧಾನಿಕ ಸಂಸ್ಥೆ ಲೋಕಾಯುಕ್ತ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿ ಅಪಮಾನ ಮಾಡಿದ್ದಾರೆ. ಎಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿದೆ? ವಿರೋಧ ಪಕ್ಷದ ನಾಯಕರಾಗಿ ಅವರು ನೀಡಿರುವ ಹೇಳಿಕೆ ಮ್ಯಾಚ್ ಫಿಕ್ಸಿಂಗಾ?" ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT