ತೇಜಸ್ವಿ ಸೂರ್ಯ online desk
ರಾಜ್ಯ

ಸರ್ಕಾರದ ಗಮನ ಸೆಳೆದಿದ್ದೇ ತಪ್ಪಾ?; ನನ್ನ ಧ್ವನಿ ಹತ್ತಿಕ್ಕುವ ಯತ್ನ: FIR ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಪೊಲೀಸ್ ಇಲಾಖೆಗೆ ಗೌರವ ನೀಡಿ ನನ್ನ ಟ್ವೀಟ್‌ ತೆಗೆದಿದ್ದೇನೆ. ಆದರೆ ಇದರ ಹಿಂದೆ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ" ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಶಿಗ್ಗಾವಿ: ಹಾವೇರಿ ಜಿಲ್ಲೆಯ ರೈತರೊಬ್ಬರ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕಾಗಿ ತಮ್ಮ ವಿರುದ್ಧ FIR ದಾಖಲಾಗಿರುವುದರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಹಾವೇರಿಯ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ನಿನ್ನೆ ಜೆಪಿಸಿ ಬಂದಾಗ ಹಾವೇರಿಯ ರೈತನ ಅಹವಾಲು ಪಡೆದೆವು. ಅದರಲ್ಲಿ ರೈತನ ಜಮೀನು ವಕ್ಫ್​​ ಎಂದು ಬದಲಾಯಿಸಿದ ಕಾರಣ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿತ್ತು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿ ಬಂದಿದೆ.‌ ರೈತನ ಕುಟುಂಬಸ್ಥರು ಕೂಡಾ ಮಾಧ್ಯಮದೆದುರು ಮಾತನಾಡಿದ್ದು ಪ್ರಸಾರವಾಗಿದೆ. ಇದ್ಯಾವುದೋ ಕಾಲ್ಪನಿಕ, ಕಾದಂಬರಿ ಬರೆದಿರುವುದಲ್ಲ. ರೈತರ ಕುಟುಂಬದವರು ಬಂದು ಮನವಿ ಕೊಟ್ಟ ಬಳಿಕ ಮಾಧ್ಯಮದವರು ಈ ಬಗ್ಗೆ ಬರೆದಿದ್ದಾರೆ. ಅವರ ಸಂದರ್ಶನ ಪ್ರಸಾರವಾಗಿದೆ" ಎಂದು ಹೇಳಿದ್ದಾರೆ.

ಇಷ್ಟೆಲ್ಲಾ ಆಗಿಯೂ ಕೂಡ ಪೊಲೀಸ್​ ವ್ಯವಸ್ಥೆಯಿಂದ ಟ್ವೀಟ್​ ಬಂದ ಕಾರಣ, ಪೊಲೀಸ್ ಇಲಾಖೆಗೆ ಗೌರವ ನೀಡಿ ನನ್ನ ಟ್ವೀಟ್‌ ತೆಗೆದಿದ್ದೇನೆ. ಆದರೆ ಇದರ ಹಿಂದೆ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ" ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಮೃತ ರೈತನ ಕುಟುಂಬದವರು ಜೆಪಿಸಿ ಎದುರು ನೀಡಿದ್ದ ಅಹವಾಲನ್ನು ಉಲ್ಲೇಖಿಸಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದೆ, ಆದರೆ ಸರ್ಕಾರ ನನ್ನ ಧ್ವನಿ ಹತ್ತಿಕ್ಕಲು, ನನ್ನ ವಿರುದ್ಧವೇ ಎಫ್​ಐಆರ್ ಹಾಕಿದೆ ಸರ್ಕಾರದ ಗಮನ ಸೆಳೆದಿದ್ದೇ ತಪ್ಪಾ? ಎಂದು ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT