ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಅಜ್ಜಿಯ ಮನೆಗೆ ತೆರಳಿದ್ದ ಬೆಂಗಳೂರಿನ ಬಾಲಕನ ಅಪಹರಣ; 22 ಲಕ್ಷ ರೂ ಹಣಕ್ಕೆ ಬೇಡಿಕೆ

ಅಮೀನಾ ಬೆಂಗಳೂರಿನ ನಿವಾಸಿಯಾಗಿದ್ದು, ಅವರ ಮಗ ಸೈಯದ್ ಮುಕ್ತಾರ್ ಹಶ್ಮಿ ಮತ್ತು ಪುತ್ರಿ ಶಮಿಸ್ತಾ ಅಲುಮೀರಾ ಅವರೊಂದಿಗೆ ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಲಬುರಗಿ: ನವೆಂಬರ್ 6 ರಂದು ಕಲಬುರಗಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗಿದ್ದ ವೇಳೆ 11 ವರ್ಷದ ಬಾಲಕನ್ನು ಕಿಡ್ನಾಪ್ ಮಾಡಲಾಗಿದೆ.

ಅಪಹರಣಕ್ಕೊಳಗಾದ ಬಾಲಕನ ತಾಯಿ ಸೈಯದಾ ಸಮೀನಾ ಅಂಜುಮ್ ಅವರು ಶುಕ್ರವಾರ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಮೀನಾ ಬೆಂಗಳೂರಿನ ನಿವಾಸಿಯಾಗಿದ್ದು, ಅವರ ಮಗ ಸೈಯದ್ ಮುಕ್ತಾರ್ ಹಶ್ಮಿ ಮತ್ತು ಪುತ್ರಿ ಶಮಿಸ್ತಾ ಅಲುಮೀರಾ ಅವರೊಂದಿಗೆ ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಅಂಜುಮ್ ನವೆಂಬರ್ 4 ರಂದು ತನ್ನ ಮಗ ಮತ್ತು ಮಗಳೊಂದಿಗೆ ಕಲಬುರಗಿಯಲ್ಲಿರುವ ತನ್ನ ಅತ್ತೆ-ಮಾನವನ ಮನೆಗೆ ಭೇಟಿ ನೀಡಿದ್ದರು. ನವೆಂಬರ್ 6 ರಂದು ಸಂಜೆ ಅವರ ಮಗ ಹತ್ತಿರದ ಮಸೀದಿಗೆ ಹೋಗಿದ್ದ ಮತ್ತು ಹಿಂತಿರುಗಲಿಲ್ಲ. ಗುರುವಾರ ಸಂಜೆ, ರಾತ್ರಿ 9 ಗಂಟೆ ಸುಮಾರಿಗೆ ಮುಖ್ಯ ಬಾಗಿಲಿನ ಬಳಿ ಪತ್ರ ಬರೆದು ಅದರಲ್ಲಿ ಅಪಹರಣಕಾರರು 22 ಲಕ್ಷ ರೂ. ಹಣ ನೀಡವಂತೆ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಹಣ ನೀಡಬೇಕು, ಇಲ್ಲದಿದ್ದರೇ ಮಗನಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಪೊಲೀಸರಿಗೆ ತಿಳಿಸದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT