ಪಾರಾಮಿಲಿಟರಿ ಪಡೆ ಆಗಮನ  
ರಾಜ್ಯ

ಚನ್ನಪಟ್ಟಣ ಉಪ ಚುನಾವಣೆ: 8 ಪ್ಯಾರಾಮಿಲಿಟರಿ ಪಡೆ ಆಗಮನ; 197 ಮತಗಟ್ಟೆಗಳಿಗೆ ನಿಯೋಜನೆ

ಚನ್ನಪಟ್ಟಣ ಕ್ಷೇತ್ರವಂತೂ ಭಾರೀ ಕುತೂಹಲ ಮೂಡಿಸಿದೆ. ಈ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆ ಅಡಗಿದೆ.

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳ ಉಪ ಚುನಾವಣೆ ಕಾವು ಏರತೊಡಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಇವುಗಳ ಪೈಕಿ ಚನ್ನಪಟ್ಟಣ ಕ್ಷೇತ್ರವಂತೂ ಭಾರೀ ಕುತೂಹಲ ಮೂಡಿಸಿದೆ. ಈ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆ ಅಡಗಿದೆ. ಚನ್ನಪಟ್ಟಣದಲ್ಲಿ ಯಾರಿಗೆ ಗೆಲುವು ಎಂದು ಚರ್ಚೆಗಳು ಸಾಗಿವೆ. ಜನರು ತಮ್ಮ ತೀರ್ಪು ನೀಡುವುದು ಬಾಕಿ ಇದೆ.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದರು. ಆದ್ದರಿಂದ ಉಪ ಚುನಾವಣೆ ಎದುರಾಗಿದೆ. ಬಿಜೆಪಿ-ಜೆಡಿಎಸ್‌ನಿಂದ ಹೆಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ. ಪುತ್ರನನ್ನ ಗೆಲ್ಲಿಸಬೇಕು ಎಂದು ಕುಮಾರಸ್ವಾಮಿ ಮತ್ತು ಮೊಮ್ಮಗನ ಸಲುವಾಗಿ ಹೆಚ್ ಡಿ ದೇವೇಗೌಡರೇ ಅಖಾಡಕ್ಕಿಳಿದು ಪಣತೊಟ್ಟು ಹಳ್ಳಿಹಳ್ಳಿಗಳಲ್ಲಿ ಪ್ರಚಾರವನ್ನು ಕೈಗೊಂಡಿದ್ದಾರೆ.

ಬಿಜೆಪಿ ನಾಯಕರಾಗಿದ್ದ ಸಿ.ಪಿ. ಯೋಗೇಶ್ವರ ಉಪ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಿದ್ದಾರೆ. ತವರು ಜಿಲ್ಲೆಯಲ್ಲಿ ಸಿ.ಪಿ. ಯೋಗೇಶ್ವರ ಗೆಲ್ಲಿಸಬೇಕು ಎಂದು ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅಬ್ಬರದ ಪ್ರಚಾರವನ್ನು ನಡೆಸುತ್ತಿದ್ದಾರೆ.

ಸೂಕ್ಷ್ಮ ಕೇಂದ್ರ: ರಾಜಕೀಯವಾಗಿ ಭಾರೀ ಪೈಪೋಟಿ ಇರುವುದರಿಂದ ಸೂಕ್ಷ್ಮ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಇಂದಿನಿಂದ ಭದ್ರತೆ ಹೆಚ್ಚಿಸಲಾಗಿದೆ. ಇಂದು ಪಟ್ಟಣಕ್ಕೆ ಅರೆಸೇನಾಪಡೆ ಆಗಮಿಸಿದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿ, ಪಾರಾಮಿಲಿಟರಿ ಪಡೆಯ 8 ತುಕಡಿಗಳು ಆಗಮಿಸಿದ್ದು, ಅವುಗಳಲ್ಲಿ 7 ತುಕಡಿಗಳನ್ನು 197 ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಮಾಹಿತಿ ನೀಡಿ, ಕ್ಷೇತ್ರದ ಬಹಿರಂಗ ಪ್ರಚಾರ ಕಾರ್ಯ ಬುಧವಾರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT