ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು

ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: 11 ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬಳು ಹಲ್ಲೆ ನಡೆಸಿ, ಹಲ್ಲು ಮುರಿಯುವಂತೆ ಹೊಡೆದಿರುವ ಘಟನೆಯೊಂದು ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.

ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ನ.7ರಂದು ಅಶ್ವಿನ್ ಜೊತೆ ಇತರ ವಿದ್ಯಾರ್ಥಿಗಳು ತರಗತಿಯಲ್ಲಿ ಗೋಸ್ಮಿಕ್ (ಗಮ್) ಮತ್ತು ನೀರು ಚೆಲ್ಲುತ್ತಾ ಆಡುತ್ತಿದ್ದರು. ಈ ವಿಚಾರವನ್ನು ಶಿಕ್ಷಕಿ ಅಸ್ಮತ್ ಅವರಿಗೆ ತಿಳಿಸಲು ಅಶ್ವಿನ್ ತೆರಳಿದ್ದು, ಅಶ್ವಿನ್ ಮುಖಕ್ಕೆ ಶಿಕ್ಷಕಿ ಕೋಲಿನಿಂದ ಹೊಡೆದಿದ್ದಾರೆ. ಈ ವೇಳೆ ಹಲ್ಲು ಮುರಿದಿದೆ. ನಂತರ ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಪೋಷಕರಿಗೆ ವಿಚಾರ ತಿಳಿಸಿ, ಕ್ಷಮೆ ಯಾಚಿಸಿದ್ದಾರೆಂದು ತಿಳಿದುಬಂದಿದೆ.

ಶಿಕ್ಷಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT