ಕಾಂಗ್ರೆಸ್  online desk
ರಾಜ್ಯ

ಮೈಸೂರು: ಖಾಸಗಿ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡನಿಂದ ಸಚಿವರಿಗೆ ಕಪಾಳಮೋಕ್ಷ..!

ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು: ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಚಿವರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರು ಕಾಂಗ್ರೆಸ್ ಮುಖಂಡನ ಎದುರಿಗೆ ಬಂದು ಹಗುರವಾದ ಧಾಟಿಯಲ್ಲಿ ಮಾತನಾಡಿದ್ದು, ಈ ವೇಳೆ ಕೆರಳಿದ ಕಾಂಗ್ರೆಸ್ ಮುಖಂಡ ಸಚಿವರಿಗೆ ಕಪಾಳ ಮೋಕ್ಷ ಮಾಡಿದರು ಎಂದು ತಿಳಿದುಬಂದಿದೆ. ಈ ಘಟನೆ ಸುತ್ತಮುತ್ತಲಿನ ಜನರ ಹುಬ್ಬೇರುವಂತೆ ಮಾಡಿದೆ.

ಸಚಿವ ಹಾಗೂ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಇಬ್ಬರೂ ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಸ್ಥಳದಲ್ಲಿ ಹೆಚ್ಚು ಜನರಿದ್ದ ಕಾರಣ ಸಚಿವರ ಬೆಂಬಲಿಗರು ಗಲಾಟೆಯನ್ನು ಮಾಡದೆ ಸ್ಥಳದಿಂದ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಇಬ್ಬರ ನಡುವೆ ವರ್ಗಾವಣೆ ದಂಧೆ ಹಣ ಹಂಚಿಕೆ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ದಂಧೆ ವಿಚಾರವಾಗಿಯೇ ಮೈಸೂರಿನಲ್ಲಿ ಸಚಿವರು, ಮತ್ತಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿ ಇದೆ. ಒಬ್ಬ ಸಚಿವರನ್ನು ಬಹಿರಂಗವಾಗಿ ಹೊಡೆದಿದ್ದಾರೆ. ರಾಜ್ಯದ ಸ್ಥಿತಿ ಎಲ್ಲಿಗೆ ಬಂದಿದೆ ನೋಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT