ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

MUDA Case: ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಗೂ ಶಾಕ್; ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ಅವರ ಆಪ್ತ ಸಚಿವ ಜಮೀರ್ ಅಹ್ಮದ್ ಗೂ ಆಘಾತ ನೀಡಿದ್ದಾರೆ.

ಹೌದು.. ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka High Court) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ.

ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪೊಲಿಟಿಕಲ್ ತೀರ್ಪು ಎಂದಿದ್ದ ಜಮೀರ್

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್​ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು.

ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಜಮೀರ್ ಅಹಮ್ಮದ್ ಖಾನ್ ಅವರು ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT