ಮನೆ ಮಾರಾಟಕ್ಕಿಟ್ಟ ನಿಜಲಿಂಗಪ್ಪ ಕುಟುಂಬಸ್ಥರು 
ರಾಜ್ಯ

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ; ಮಾಜಿ ಮುಖ್ಯಮಂತ್ರಿ ಎಸ್​ ನಿಜಲಿಂಗಪ್ಪ ಮನೆ ಮಾರಾಟಕ್ಕೆ!

ಚಿತ್ರದುರ್ಗ ನಗರದ ವಾರ್ಡ್​ ನಂ 32 ವಿಪಿ ಬಡಾವಣೆಯ ಡಿಸಿ ಬಂಗಲೆಯ ಹತ್ತಿರ ಇರುವ 117 X 130 ಅಡಿ ವಿಸ್ತೀರ್ಣದ ಶ್ವೇತ ಭವನದಲ್ಲಿ ಮಾಜಿ ಮುಖ್ಯಮಂತ್ರಿಗಳು ವಾಸವಾಗಿದ್ದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಕುಟುಂಬವು ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿರುವ ಜಿಲ್ಲಾಧಿಕಾರಿ ಬಂಗಲೆಯ ಪಕ್ಕದಲ್ಲಿರುವ 'ವಿನಯಾ' ಬಂಗಲೆಯನ್ನು ಮಾರಾಟಕ್ಕೆ ಇಟ್ಟಿದೆ.

ನಿಜಲಿಂಗಪ್ಪ ಅವರ ಪುತ್ರ ಕಿರಣ್ ಶಂಕರ್ 1937ರಲ್ಲಿ ನಿಜಲಿಂಗಪ್ಪ ವಕೀಲರಾಗಿದ್ದಾಗ ನಿರ್ಮಿಸಿದ ಮನೆಯನ್ನು 10 ಕೋಟಿ ರೂ.ಗೆ ಮಾರಾಟ ಮಾಡಲಾಗುವುದು. ಆಸ್ತಿ 5,000 ಚದರ ಅಡಿ ಭೂಮಿಯಲ್ಲಿ ಹರಡಿದೆ ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ವಾರ್ಡ್​ ನಂ 32 ವಿಪಿ ಬಡಾವಣೆಯ ಡಿಸಿ ಬಂಗಲೆಯ ಹತ್ತಿರ ಇರುವ 117 X 130 ಅಡಿ ವಿಸ್ತೀರ್ಣದ ಶ್ವೇತ ಭವನದಲ್ಲಿ ಮಾಜಿ ಮುಖ್ಯಮಂತ್ರಿಗಳು ವಾಸವಾಗಿದ್ದರು. ಈ ಮನೆಯನ್ನು ಹತ್ತು ಕೋಟಿ ರೂ .ಗೆ ಮಾರಾಟ ಮಾಡಲು ನಿಜಲಿಂಗಪ್ಪ ಅವರ ಪುತ್ರ ಎಸ್​ಎನ್​ ಕಿರಣಶಂಕರ್​ ಮುಂದಾಗಿದ್ದಾರೆ. ಬಂಗಲೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರಕ್ಕೆ ಮಾರಾಟ ಮಾಡಲು ಕುಟುಂಬವು ನಡೆಸಿದ ಪ್ರಯತ್ನ ವಿಫಲವಾದ ನಂತರ ಖಾಸಗಿಯವರಿಗೆ ಮಾರಾಟಕ್ಕಿಟ್ಟಿದ್ದಾರೆ.

ಈ ಮನೆಯನ್ನು ನಿಜಲಿಂಗಪ್ಪ ಅವರು ತಮ್ಮ ಮೊಮ್ಮಗ ವಿನಯ್​ ಅವರ ಹೆಸರಿಗೆ ವಿಲ್​ ಬರೆದಿದ್ದಾರೆ. ಹೀಗಾಗಿ, ಈ ಮನೆಯನ್ನು ಸಬ್​ರಿಜಿಸ್ಟಾರ್​ ಮೂಲಕ ನೋಂದಣಿ ಮಾಡಲು ಸಾಧ್ಯವಾಗುತ್ತಿಲ್ಲ. ಕಾರಣ ನಿಜಲಿಂಗಪ್ಪ ಪುತ್ರ ಈ ಮನೆ ಅನುಭವಿಸಿದ ಬಳಿಕ ವಿನಯ್​ಗೆ ಮನೆ ಸೇರಬೇಕು ಎಂದು ವಿಲ್​ನಲ್ಲಿದೆ. ವಿನಯ್​ ಅವರ ಹೆಸರಿಗೆ ರಿಜಿಸ್ಟ್ರೇಶನ್​ ಆಗದೇ ಸರ್ಕಾರಕ್ಕೆ ಮನೆ ಖರೀದಿಸಲು ಸಾಧ್ಯವಿಲ್ಲ. ಮಾಜಿ ಎಂಎಲ್‌ಸಿ ಹಾಗೂ ನಿಜಲಿಂಗಪ್ಪ ಅವರ ನಿಕಟವರ್ತಿ ಮೋಹನ್‌ಕುಮಾರ್‌ ಕೊಂಡಜ್ಜಿ ಮಾತನಾಡಿ, ‘ಅಂದಿನ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮನೆ ಖರೀದಿ ಪ್ರಕ್ರಿಯೆ ಆರಂಭಿಸಿ ನೋಂದಣಿಯಾಗದ ಉಯಿಲಿನ ಬಗ್ಗೆ ಕಾನೂನು ಅಭಿಪ್ರಾಯ ಪಡೆದಿದ್ದರು.

ಆದರೆ ಸರಿಯಾಗಿ ಮಾಹಿತಿ ನೀಡದ ಅಂದಿನ ಸಬ್ ರಿಜಿಸ್ಟ್ರಾರ್ ಡೀಲ್ ನಿಲ್ಲಿಸಿ, ಅಮೆರಿಕದಿಂದ ಬಂದಿದ್ದ ನಿಜಲಿಂಗಪ್ಪ ಅವರ ಮೊಮ್ಮಗ ವಿನಯ್ ಕಿರಣಶಂಕರ್ ಸಿದ್ದವ್ವನಹಳ್ಳಿ ವಾಪಸ್ ತೆರಳಿದ್ದರು. ಅದರ ನಂತರ, ಕುಟುಂಬವು ಆಸ್ತಿಯನ್ನು ಸರ್ಕಾರಕ್ಕೆ ಮಾರಾಟ ಮಾಡದಿರಲು ನಿರ್ಧರಿಸಿತು. ಸರ್ಕಾರ ವಿನಯ್​ ಅವರ ಹೆಸರಿಗೆ ರಿಜಿಸ್ಟ್ರೇಶನ್​ ಮಾಡಲು ಮುಂದಾಗುತ್ತಿಲ್ಲ. ಇನ್ನು, ವಿನಯ್​ ವಿದೇಶದಲ್ಲಿದ್ದಾರೆ. ಆದರೆ, ಸರ್ಕಾರ ಮನಸ್ಸು ಮಾಡಿ ಕಾನೂನು ತೊಡಕು ಸರಿಸಿ ಮನೆ ಖರೀದಿಸಿ, ಸ್ಮಾರಕ ಮಾಡಬೇಕು ಎಂದು ಜನರ ಆಗ್ರಹವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT