ಪ್ರಮೋದ್ ಮುತಾಲಿಕ್ 
ರಾಜ್ಯ

ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ, ಆತನನ್ನು ಆಲದ ಮರಕ್ಕೆ ನೇಣು ಹಾಕಿ: ಪ್ರಮೋದ್ ಮುತಾಲಿಕ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರು: ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ ಸ್ಥಾನದಿದ ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ಅವರು ಮಾತನಾಡಿದ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಜಮೀರ್‍ ನನ್ನು ಗಡಿಪಾರು, ಕಿತ್ತಾಕಿ, ಸಸ್ಪೆಂಡ್ ಮಾಡಿ ಅಂತಿದ್ದಾರೆ. ಗಡಿಪಾರು, ಸಸ್ಪೆಂಡ್ ಬೇಡ ಯಾವುದಾರೂ ಆಲದಮರಕ್ಕೆ ನೇಣು ಹಾಕಿ. ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ. ಯಾರ ಭೂಮಿ, ಕಟ್ಟಡ ಬೇಕೋ ಅದನ್ನು ತೆಗೆದುಕೊಂಡು ನುಂಗಿ ನೀರು ಕುಡಿಯೋಕೆ ಇದು ನಿಮ್ಮ ಅಪ್ಪಂದ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಸ್ಲಾಮೀಕರಣದ ಉದ್ದೇಶದಿಂದ ಭೂಮಿ ಕಬಳಿಸಿ, ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದೆ ಕರ್ನಾಟಕದಲ್ಲಿ ಬರೀ ನಮಾಜ್ ಮಾಡುವುದು, ಬುರ್ಖಾ ಹಾಕುವುದೇ ಆಗುತ್ತದೆ. ವಕ್ಫ್ ಆಸ್ತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಾದ್ಯಂತ 9. 40 ಲಕ್ಷ ಎಕರೆ ಜಾಗ ವಕ್ಫ್ ಮಂಡಳಿಗೆ ಸೇರಿದೆ. ಹೀಗಾಗಿ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಕ್ರಿಯೆ ಆರಂಭಿಸಿದೆ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್