ಮೃತ ರುದ್ರೇಶ್ವರ್ 
ರಾಜ್ಯ

ಎಸ್ ಡಿಸಿ ಆತ್ಮಹತ್ಯೆ ಪ್ರಕರಣ: ಸಿಬ್ಬಂದಿಗೆ ತಹಶೀಲ್ದಾರ್ ಕಿರುಕುಳ ನೀಡುತ್ತಿದ್ದರು; ನೌಕರರ ಆರೋಪ

ಶುಕ್ರವಾರ ಕನಿಷ್ಠ ಐವರು ಮತ್ತು ಶನಿವಾರ 25 ಮಂದಿಯನ್ನು ವಿಚಾರಣೆಗೊಳಪಡಿಸಿದರು. ಈ ವೇಳೆ ಸಿಬ್ಬಂದಿಗೆ ನಾಗರಾಳ ಕೊಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

ಬೆಳಗಾವಿ: ಇತ್ತೀಚೆಗೆ ತಹಶೀಲ್ದಾರ್ ಬಸವರಾಜ ನಾಗರಾಳ್ ಅವರ ಅಧಿಕೃತ ಕೊಠಡಿಯಲ್ಲಿ ಎಸ್‌ಡಿಸಿ ರುದ್ರೇಶ್ ಯಾದವಣ್ಣನವರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುವ ಹಲವಾರು ನೌಕರರು ಪೊಲೀಸರ ವಿಚಾರಣೆ ವೇಳೆ ತಹಶೀಲ್ದಾರ್ ಕಿರುಕುಳ ನೀಡುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

ಯಾದವಣ್ಣನವರ್ ಅವರು ತಹಶೀಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ, ಸೋಮು ಮತ್ತು ಕಚೇರಿಯಲ್ಲಿರುವ ಎಫ್‌ಡಿಸಿ ಅಶೋಕ್ ಕಬ್ಬಲಿಗೇರ್ ಅವರ ಸಾವಿಗೆ ನೇರ ಹೊಣೆ ಎಂದು ಹೆಸರಿಸಿರುವುದನ್ನು ಇಲ್ಲಿ ಗಮನಿಸಬಹುದು. ಆತ್ಮಹತ್ಯೆಗೆ ಕೆಲ ದಿನಗಳ ಹಿಂದೆ ತಹಶೀಲ್ದಾರ್ ನಾಗರಾಳ ಮತ್ತು ಸೋಮು ಅದೇ ಕಚೇರಿಯಲ್ಲಿ ಒಳ್ಳೆಯ ಪೋಸ್ಟಿಂಗ್ ಕೊಡಿಸುವುದಾಗಿ 2.5 ಲಕ್ಷ ಲಂಚ ವಸೂಲಿ ಮಾಡಿರುವುದಾಗಿ ರುದ್ರೇಶ್ವರ್ ಹಲವು ಸ್ನೇಹಿತರು ಹಾಗೂ ಮಾಧ್ಯಮದವರಿಗೆ ತಿಳಿಸಿದ್ದರು.

ಶುಕ್ರವಾರ ಮತ್ತು ಶನಿವಾರ ಬೆಳಗಾವಿಯ ಖಡೇಬಜಾರ್ ಪೊಲೀಸರು ತಹಶೀಲ್ದಾರ್ ಕಚೇರಿಯ ಹಲವು ನೌಕರರನ್ನು ವಿಚಾರಣೆ ನಡೆಸಿದರು. ಶುಕ್ರವಾರ ಕನಿಷ್ಠ ಐವರು ಮತ್ತು ಶನಿವಾರ 25 ಮಂದಿಯನ್ನು ವಿಚಾರಣೆಗೊಳಪಡಿಸಿದರು. ಈ ವೇಳೆ ಸಿಬ್ಬಂದಿಗೆ ನಾಗರಾಳ ಕೊಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. 'ತಹಶೀಲ್ದಾರ್ ಆಫೀಸ್ ಆಲ್ ಸ್ಟಾಫ್ ಗ್ರೂಪ್' ಎಂಬ ಕಚೇರಿಯ ವಾಟ್ಸಾಪ್ ಗುಂಪಿನ ಎಲ್ಲಾ ಸದಸ್ಯರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯವು ನವೆಂಬರ್ 12 ರಂದು ವಿಚಾರಣೆಗೆ ನಡೆಸಲಿದೆ.

ತಹಶೀಲ್ದಾರ್ ಕಚೇರಿಗೆ ಹೋಗುವ ಗಂಟೆಗಳ ಮೊದಲು ಯಾದವಣ್ಣನವರ್ ಸೋಮವಾರ ಸಂಜೆ 7.30 ಕ್ಕೆ ಅಧಿಕೃತ ವಾಟ್ಸಾಪ್ ಗುಂಪಿನಲ್ಲಿ ತಮ್ಮ ಕೊನೆಯ ಸಂದೇಶವನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ಗ್ರೂಪ್‌ನಿಂದ ಪರಸ್ಪರ ವಿನಿಮಯವಾದ ಕೆಲವು ಚಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT