ಮೃತ ರುದ್ರೇಶ್ವರ್ 
ರಾಜ್ಯ

ಎಸ್ ಡಿಸಿ ಆತ್ಮಹತ್ಯೆ ಪ್ರಕರಣ: ಸಿಬ್ಬಂದಿಗೆ ತಹಶೀಲ್ದಾರ್ ಕಿರುಕುಳ ನೀಡುತ್ತಿದ್ದರು; ನೌಕರರ ಆರೋಪ

ಶುಕ್ರವಾರ ಕನಿಷ್ಠ ಐವರು ಮತ್ತು ಶನಿವಾರ 25 ಮಂದಿಯನ್ನು ವಿಚಾರಣೆಗೊಳಪಡಿಸಿದರು. ಈ ವೇಳೆ ಸಿಬ್ಬಂದಿಗೆ ನಾಗರಾಳ ಕೊಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

ಬೆಳಗಾವಿ: ಇತ್ತೀಚೆಗೆ ತಹಶೀಲ್ದಾರ್ ಬಸವರಾಜ ನಾಗರಾಳ್ ಅವರ ಅಧಿಕೃತ ಕೊಠಡಿಯಲ್ಲಿ ಎಸ್‌ಡಿಸಿ ರುದ್ರೇಶ್ ಯಾದವಣ್ಣನವರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುವ ಹಲವಾರು ನೌಕರರು ಪೊಲೀಸರ ವಿಚಾರಣೆ ವೇಳೆ ತಹಶೀಲ್ದಾರ್ ಕಿರುಕುಳ ನೀಡುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

ಯಾದವಣ್ಣನವರ್ ಅವರು ತಹಶೀಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ, ಸೋಮು ಮತ್ತು ಕಚೇರಿಯಲ್ಲಿರುವ ಎಫ್‌ಡಿಸಿ ಅಶೋಕ್ ಕಬ್ಬಲಿಗೇರ್ ಅವರ ಸಾವಿಗೆ ನೇರ ಹೊಣೆ ಎಂದು ಹೆಸರಿಸಿರುವುದನ್ನು ಇಲ್ಲಿ ಗಮನಿಸಬಹುದು. ಆತ್ಮಹತ್ಯೆಗೆ ಕೆಲ ದಿನಗಳ ಹಿಂದೆ ತಹಶೀಲ್ದಾರ್ ನಾಗರಾಳ ಮತ್ತು ಸೋಮು ಅದೇ ಕಚೇರಿಯಲ್ಲಿ ಒಳ್ಳೆಯ ಪೋಸ್ಟಿಂಗ್ ಕೊಡಿಸುವುದಾಗಿ 2.5 ಲಕ್ಷ ಲಂಚ ವಸೂಲಿ ಮಾಡಿರುವುದಾಗಿ ರುದ್ರೇಶ್ವರ್ ಹಲವು ಸ್ನೇಹಿತರು ಹಾಗೂ ಮಾಧ್ಯಮದವರಿಗೆ ತಿಳಿಸಿದ್ದರು.

ಶುಕ್ರವಾರ ಮತ್ತು ಶನಿವಾರ ಬೆಳಗಾವಿಯ ಖಡೇಬಜಾರ್ ಪೊಲೀಸರು ತಹಶೀಲ್ದಾರ್ ಕಚೇರಿಯ ಹಲವು ನೌಕರರನ್ನು ವಿಚಾರಣೆ ನಡೆಸಿದರು. ಶುಕ್ರವಾರ ಕನಿಷ್ಠ ಐವರು ಮತ್ತು ಶನಿವಾರ 25 ಮಂದಿಯನ್ನು ವಿಚಾರಣೆಗೊಳಪಡಿಸಿದರು. ಈ ವೇಳೆ ಸಿಬ್ಬಂದಿಗೆ ನಾಗರಾಳ ಕೊಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. 'ತಹಶೀಲ್ದಾರ್ ಆಫೀಸ್ ಆಲ್ ಸ್ಟಾಫ್ ಗ್ರೂಪ್' ಎಂಬ ಕಚೇರಿಯ ವಾಟ್ಸಾಪ್ ಗುಂಪಿನ ಎಲ್ಲಾ ಸದಸ್ಯರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯವು ನವೆಂಬರ್ 12 ರಂದು ವಿಚಾರಣೆಗೆ ನಡೆಸಲಿದೆ.

ತಹಶೀಲ್ದಾರ್ ಕಚೇರಿಗೆ ಹೋಗುವ ಗಂಟೆಗಳ ಮೊದಲು ಯಾದವಣ್ಣನವರ್ ಸೋಮವಾರ ಸಂಜೆ 7.30 ಕ್ಕೆ ಅಧಿಕೃತ ವಾಟ್ಸಾಪ್ ಗುಂಪಿನಲ್ಲಿ ತಮ್ಮ ಕೊನೆಯ ಸಂದೇಶವನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ ಗ್ರೂಪ್‌ನಿಂದ ಪರಸ್ಪರ ವಿನಿಮಯವಾದ ಕೆಲವು ಚಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT