ಮೃತ ರೈತನ ಪೋಷಕರ ಭೇಟಿಯಾದ ಬಿಜೆಪಿ ನಿಯೋಗ. 
ರಾಜ್ಯ

ವಕ್ಫ್ ವಿವಾದ: ರೈತ ಚನ್ನಪ್ಪ ಬಾಳಿಕಾಯಿ ಮನೆಗೆ BJP ನಿಯೋಗ ಭೇಟಿ, ಒಗ್ಗಟ್ಟು ಪ್ರದರ್ಶನ

ಹಾವೇರಿ ಜಿಲ್ಲೆಯಲ್ಲಿ 1964ರಲ್ಲಿ ಖರೀದಿಯಾದ ಜಮೀನನ್ನು 2015ರಲ್ಲಿ ವಕ್ಫ್​ ಆಸ್ತಿಯನ್ನಾಗಿ ನಮೂದು ಮಾಡಲಾಗಿದ್ದು, ಬೆಳೆದು ನಿಂತ ಹತ್ತಿ, ಕಬ್ಬು ಬೆಳೆ ನಾಶ ಮಾಡಿ ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.

ಹಾವೇರಿ: ಹಾನಗಲ್ಲ ತಾಲೂಕಿನ ಹರನಗಿರಿ ಗ್ರಾಮದ ರೈತ ಚನ್ನಪ್ಪ ಬಾಳಿಕಾಯಿ ಅವರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಶನಿವಾರ ಭೇಟಿ ನೀಡಿದ್ದು, ಕುಟುಂಬಕ್ಕಾಗಿರುವ ಅನ್ಯಾಯದ ಕುರಿತು ಮಾಹಿತಿ ಪಡೆದುಕೊಂಡರು.

ಹಾವೇರಿ ಜಿಲ್ಲೆಯಲ್ಲಿ 1964ರಲ್ಲಿ ಖರೀದಿಯಾದ ಜಮೀನನ್ನು 2015ರಲ್ಲಿ ವಕ್ಫ್​ ಆಸ್ತಿಯನ್ನಾಗಿ ನಮೂದು ಮಾಡಲಾಗಿದ್ದು, ಬೆಳೆದು ನಿಂತ ಹತ್ತಿ, ಕಬ್ಬು ಬೆಳೆ ನಾಶ ಮಾಡಿ ವಶಪಡಿಸಿಕೊಂಡಿದ್ದಾರೆನ್ನಲಾಗಿದೆ. ರೈತ ರುದ್ರಪ್ಪ ಜಮೀನಿನಲ್ಲಿ ಉಳುಮೆ ಮಾಡಿದ್ದು, ಯಾವುದೇ ನೋಟಿಸ್ ನೀಡದೆ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ವಕ್ಫ್ ತಿದ್ದುಪಡಿ ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಮೃತನ ಕುಟುಂಬವನ್ನು ಭೇಟಿ ಮಾಡಿದ್ದು, ಪಾಲ್ ಅವರ ಈ ನಡೆ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ, ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿತ್ತು.

ಈ ನಡುವೆ ಶನಿವಾರ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಮುರುಗೇಶ್ ನಿರಾಣಿ, ಎಂಎಲ್ ಸಿ ರವಿಕುಮಾರ್ ಮತ್ತಿತರರನ್ನು ಒಳಗೊಂಡ ಬಿಜೆಪಿ ನಿಯೋಗ ಚನ್ನಪ್ಪ ಅವರನ್ನು ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಾಂತ್ವನ ಹೇಳಿ ಒಗ್ಗಟ್ಟು ಪ್ರದರ್ಶಿಸಿದರು.

ಭೇಟಿ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಕ್ಫ್ ಒತ್ತುವರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಸೂಚನೆ ನೀಡಿದರೂ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT