ಹತ್ಯೆ (ಸಾಂಕೇತಿಕ ಚಿತ್ರ) online desk
ರಾಜ್ಯ

ವಿಧವೆಯೊಂದಿಗೆ ಸಂಬಂಧ; ಗೆಳೆಯನ ಹತ್ಯೆ; ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಿಕೃತಿ!

ಇಬ್ಬರು ಯುವಕರು ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವಿಸಿದ ನಂತರ ಮತ್ತೊಂದು ಸುತ್ತು ಮದ್ಯ ಸೇವಿಸಲು ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಿಜಯಪುರ: ಕುಡಿದ ಅಮಲಿನಲ್ಲಿ ವಿವಾಹಿತ ಮಹಿಳೆಯೊಬ್ಬರ ವಿಚಾರಕ್ಕೆ 21 ವರ್ಷದ ಯುವಕನನ್ನು ಆತನ ಸ್ನೇಹಿತನೇ ಕೊಲೆ ಮಾಡಿ, ತನ್ನ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ಯುವಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಆತನ ಸ್ನೇಹಿತ ಸಂತೋಷ್(23), ಸುನೀಲ್‌ನ ಕತ್ತಿಗೆ ಹಗ್ಗ ಹಾಕಿ ಕತ್ತಿನ ಮೇಲೆ ಕಾಲಿಟ್ಟು ಆತನ ಉಸಿರು ಗಟ್ಟಿಸಿ ಕೊಲೆ ಮಾಡುವ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಜಮೀನಿನಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಇಬ್ಬರು ಯುವಕರು ಸ್ಥಳೀಯ ಬಾರ್‌ನಲ್ಲಿ ಮದ್ಯ ಸೇವಿಸಿದ ನಂತರ ಮತ್ತೊಂದು ಸುತ್ತು ಮದ್ಯ ಸೇವಿಸಲು ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಜಮೀನಿನಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯ ವಿಚಾರ ಪ್ರಸ್ತಾಪವಾಗಿದೆ. ವಿಧವೆಯೊಂದಿಗೆ ಸಂಬಂಧದ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ಹೋಗಿದ್ದು, ಕೋಪದ ಭರದಲ್ಲಿ ಸಂತೋಷ್, ಸುನೀಲ್ ಕತ್ತಿಗೆ ಹಗ್ಗ ಹಾಕಿ ಕತ್ತಿನ ಮೇಲೆ ಕಾಲಿಟ್ಟು ಆತನ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಕೃತ್ಯವನ್ನು ವಿಡಿಯೋ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ವಿಡಿಯೋ ರೆಕಾರ್ಡ್ ಮಾಡಿದ ನಂತರ, ಆರೋಪಿಯು ಅದನ್ನು ತನ್ನ ಸ್ನೇಹಿತರೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಾನೆ ಎಂದು ವರದಿಯಾಗಿದೆ. ಈ ಕೊಲೆಯಲ್ಲಿ ಇನ್ನೊಬ್ಬ ವ್ಯಕ್ತಿಯ ಭಾಗಿಯಾಗಿರುವುದು ಸಹ ಬೆಳಕಿಗೆ ಬಂದಿದೆ. ಆದರೆ ಇದು ಇನ್ನೂ ತನಿಖೆಯ ಹಂತದಲ್ಲಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT