ಪ್ರಜ್ವಲ್ ರೇವಣ್ಣ 
ರಾಜ್ಯ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ!

ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು. ಹೀಗಾಗಿ ಅವರಿಗೆ ಜೈಲೇ ಗತಿಯಾಗಿದೆ.

ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಈ ಮೂಲಕ ಜಾಮೀನು ಸಿಗಬಹುದೆಂಬ ಪ್ರಜ್ವಲ್ ರೇವಣ್ಣ ನಿರೀಕ್ಷೆ ಹುಸಿಯಾಗಿದೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇದೇ ವರ್ಷ ಮೇ ತಿಂಗಳಲ್ಲಿ ಪ್ರಜ್ವಲ್ ಜರ್ಮನಿಯಿಂದ ಹಿಂದಿರುಗಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.

ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ, ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ದೂರಿನಲ್ಲಿ ಆರೋಪಿ ಎಂದು ಹೆಸರಿಸಲಾದ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಾಮಾಡಿದ್ದು, ಮುಂದೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ಪಾಕಿಸ್ತಾನದ ಮುಸ್ಲಿಮ್ ಉಮ್ಮಾ ಗೆ ಕಾಡ್ತಿದೆ ಇಸ್ರೇಲ್- ಭಾರತದ Hexagon Alliance ಗುಮ್ಮಾ!

SCROLL FOR NEXT