ಸಾಂದರ್ಭಿಕ ಚಿತ್ರ 
ರಾಜ್ಯ

ಮುಂಬೈ ಸೈಬರ್ ಪೊಲೀಸರ ಹೆಸರಿನಲ್ಲಿ ಕರೆ: ನಾಲ್ಕು 4 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗ ಯುವತಿ

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ನವೆಂಬರ್ 4 ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ತಾವು ಫೆಡ್‌ಎಕ್ಸ್‌ನಿಂದ ಮಾತನಾಡುತ್ತಿದ್ದು, ನಿಮ್ಮ ಹೆಸರಿನಲ್ಲಿ ಇರಾನ್ ಗೆ ಪಾರ್ಸಲ್ ಹೋಗುತ್ತಿದೆ.

ಶಿವಮೊಗ್ಗ: ತಾವು ಅಂತಾರಾಷ್ಟ್ರೀಯ ಪಾರ್ಸೆಲ್ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಅಧಿಕಾರಿಗಳು ಎಂದು ಹೇಳಿಕೊಂಡು ಶಿವಮೊಗ್ಗದ 23 ವರ್ಷದ ಯುವತಿಯೊಬ್ಬರಿಗೆ 4 ಲಕ್ಷ ರೂಪಾಯಿ ವಂಚಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ನವೆಂಬರ್ 4 ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ತಾವು ಫೆಡ್‌ಎಕ್ಸ್‌ನಿಂದ ಮಾತನಾಡುತ್ತಿದ್ದು, ನಿಮ್ಮ ಹೆಸರಿನಲ್ಲಿ ಇರಾನ್ ಗೆ ಪಾರ್ಸಲ್ ಹೋಗುತ್ತಿದೆ. ಆ ಬಗ್ಗೆ ಮುಂಬೈ ಸೈಬರ್ ಕ್ರೈಂ ಪೊಲೀಸು ಮಾತನಾಡುತ್ತಾರೆ ಎಂದು ಹೇಳಿ ಕರೆ ಕನೆಕ್ಟ್ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯಂತೆ ಮಾತನಾಡಿದ ಮತ್ತೊಬ್ಬ ವ್ಯಕ್ತಿ, ಪಾರ್ಸಲ್ ನಲ್ಲಿ ಲ್ಯಾಪ್‌ಟಾಪ್, ಐದು ಕ್ರೆಡಿಟ್ ಕಾರ್ಡ್‌ಗಳು ಮತ್ತು 420 ಗ್ರಾಂ ಎಂಡಿಎಂಎ ಡ್ರಗ್ಸ್ ಇದೆ. ಈ ಬಗ್ಗೆ ವಿಚಾರಣೆ ಮಾಡಬೇಕು ಎಂದು ಬೆದರಿಕೆ ಹಾಕಿದ್ದಾರೆ.

ಯುವತಿಗೆ ನಿಮ್ಮ ಹೇಳಿಕೆ ದಾಖಲಿಸಿಕೊಳ್ಳಲು ಸ್ಕೈಪ್ ಆಪ್ ಡೌನ್ ಲೋಡ್ ಮಾಡುವಂತೆ ನಕಲಿ ಅಧಿಕಾರಿ ಸೂಚಿಸಿದ್ದಾರೆ. ಅವರ ಸೂಚನೆಯಂತೆ ಆಪ್ ಡೌನ್ ಲೋಡ್ ಮಾಡಿದ್ದು, ತಕ್ಷಣ ಸಾಲಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಯುವತಿಯ ಬ್ಯಾಂಕ್ ಖಾತೆಗೆ ಸಾಲದ ಮೊತ್ತ 3,75,281 ಜಮೆಯಾಗಿದೆ. ನಂತರ ಎರಡು ಬ್ಯಾಂಕ್ ಖಾತೆಯ ವಿವರ ನೀಡಿ, ಅವುಗಳಿಗೆ ತಲಾ 2 ಲಕ್ಷ ರೂ. ವರ್ಗಾಯಿಸುವಂತೆ ಸೂಚಿಸಲಾಗಿದ್ದು, ಯುವತಿ ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಅನುಮಾನಗೊಂಡ ಮಹಿಳೆ, ಸೈಬರ್ ಕ್ರೈಮ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದಾರೆ.

ಜಯನಗರ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಡಿ, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 318(4) (ವಂಚನೆ) ಮತ್ತು 319(2)(ಯಾರೊಬ್ಬರಂತೆ ನಟಿಸಿ ವಂಚನೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT