ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮನೆಯಲ್ಲಿ ಒಂಟಿ ಮಹಿಳೆ ಹತ್ಯೆ; ಮಗ, ಸೋದರಳಿಯನ ಬಂಧನ

ನವೆಂಬರ್ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಉಮೇಶ್ ತನ್ನ ತಾಯಿಯ ಮನೆಗೆ ಹೋಗಿ ಹಣ ನೀಡಲಿಲ್ಲ ಎಂದು ಜಗಳವಾಡಿದ್ದಾನೆ. ತೀವ್ರ ವಾಗ್ವಾದದಲ್ಲಿ ಆಕೆಯ ಮುಖಕ್ಕೆ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬೆಂಗಳೂರು: ಹೊಂಗಸಂದ್ರದಲ್ಲಿ ನ.8ರಂದು ನಡೆದ ಒಂಟಿ ಮಹಿಳೆಯ ಹತ್ಯೆ ಪ್ರಕರಣದಲ್ಲಿ ಮಹಿಳೆಯ ಮಗ ಮತ್ತು ಆಕೆಯ ಸೋದರಳಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಕಿರಿಯ ಮಗ ಉಮೇಶ್ ಮತ್ತು ಆಕೆಯ ಸೋದರಳಿಯ ಸುರೇಶ್ ಬಂಧಿತರು.

ಜಯಮ್ಮ ಎಂಬ ಮಹಿಳೆ ಇತ್ತೀಚೆಗೆ ಆಸ್ತಿ ಮಾರಾಟ ಮಾಡಿದ್ದು, ಆಟೋರಿಕ್ಷಾ ಚಾಲಕ ಉಮೇಶ್‌ಗೆ ಪಾಲು ಕೊಡಲು ನಿರಾಕರಿಸಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಅವರ ಹಿರಿಯ ಮಗ ಆನೇಕಲ್‌ನಲ್ಲಿದ್ದು, ಕೆಎಸ್‌ಆರ್‌ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ತಮಿಳುನಾಡಿನ ಜಯಮ್ಮ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನವೆಂಬರ್ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಉಮೇಶ್ ತನ್ನ ತಾಯಿಯ ಮನೆಗೆ ಹೋಗಿ ಹಣ ನೀಡಲಿಲ್ಲ ಎಂದು ಜಗಳವಾಡಿದ್ದಾನೆ. ತೀವ್ರ ವಾಗ್ವಾದದಲ್ಲಿ ಆಕೆಯ ಮುಖಕ್ಕೆ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಮರುದಿನ ಕಟ್ಟಡದ ಮಾಲೀಕರು ಜಯಮ್ಮ ಅವರ ಮನೆಯ ಮುಂಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹತ್ಯೆಗೆ ಸಹಾಯ ಮಾಡಿದ್ದಕ್ಕಾಗಿ ಸುರೇಶ್ ನನ್ನು ಬಂಧಿಸಲಾಗಿದೆ. ಬೊಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT