ಸಚಿವ ಪ್ರಿಯಾಂಕ್ ಖರ್ಗೆ  online desk
ರಾಜ್ಯ

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ

ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದರು.

ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗ್ರಾಮೀಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಚಯಗಳು ನಿರ್ಮಾಣಗೊಂಡಿವೆ. ಬಹುಪಾಲು ಆಸ್ತಿಗಳು ಗ್ರಾ.ಪಂ. ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣ ದಲ್ಲಿ ಹಿನ್ನಡೆ ಉಂಟಾಗಿದೆ.

ಹೀಗಾಗಿ ಗ್ರಾ.ಪಂ.ಗಳನ್ನು ಸದೃಢಗೊಳಿಸುವಲ್ಲಿ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅನಿವಾರ್ಯ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT