ಸಂಗ್ರಹ ಚಿತ್ರ 
ರಾಜ್ಯ

ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ.

ಹಾಸನ: ದಿಢೀರ್‌ ಖ್ಯಾತರಾಗಬೇಕೆಂಬ ಹವ್ಯಾಸಕ್ಕೆ ಅಂಟಿಕೊಂಡ ಯುವ ಜನತೆ ಇತ್ತೀಚಿನ ದಿನಗಳಲ್ಲಿ ರೀಲ್ಸ್ ಗೀಳಿಗೆ ಬಿದ್ದು ಸಾಮಾಜಿಕ ಜವಾಬ್ದಾರಿಗಳನ್ನೇ ಮರೆಯುತ್ತಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಸನದ ರಾಜೀವ್ ಆಯುರ್ವೇದ ಕಾಲೇಜಿನ ಆಯುರ್ವೇದ ಮೆಡಿಸಿನ್ ಮತ್ತು ಸರ್ಜರಿ ಪದವಿ ವ್ಯಾಸಂಗ ಮಾಡುತ್ತಿರುವ ಲೋಕಕಿರಣ್ ಹೆಚ್ ಎಂಬಾತ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕಾಲೇಜಿನ ಪಕ್ಕದ ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ವಿಡಿಯೋವನ್ನು ಲೋಕಕಿರಣ್ ಸ್ನೇಹಿತ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ.

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ. ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಇನ್ಸ್‌ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಬೆಂಕಿ ಹೊರಚಿಮ್ಮಿದ 200 ಮೀಟರ್ ದೂರದಲ್ಲೇ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಿಂತಿತ್ತು. ಇದನ್ನು ಪರಿಗಣಿಸದೇ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಫೋಟಿಸಿದ್ದಾರೆ. ಇದಲ್ಲದೆ, ಪಕ್ಕದಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿ. ಸಂಸ್ಥೆ ಕೂಡ ಇದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ.

ಒಂದು ವೇಳೆ ಸ್ಫೋಟದಿಂದ ಹೊರಚಿಮ್ಮಿದ ಬೆಂಕಿ ಪೆಟ್ರೋಲ್ ತುಂಬಿದ ವಾಹನಕ್ಕೆ ತಗುಲಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT