ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

'ಕಾಲಾ ಕುಮಾರಸ್ವಾಮಿ' ಹೇಳಿಕೆ: ಸಚಿವ ಜಮೀರ್ ವಜಾಗೊಳಿಸಿ; ಸಿಎಂಗೆ ಒಕ್ಕಲಿಗರ ಆಗ್ರಹ

ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್‌ ಅವರು ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ.

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್‌ ಅವರು ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ, ರಾಜ್ಯದ ಜನರಿಗೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಶೋಭೆ ತರುವುದಿಲ್ಲ. ಸಭ್ಯತೆಯ ಎಲ್ಲೆ ಮೀರಿ ಮಾತನಾಡುವ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.

ಜಮೀರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. ರಾಜಕೀಯವಾಗಿ ಯಾರಿಗೂ ನೋವಾಗದಂತೆ ಟೀಕೆ-ಟಿಪ್ಪಣಿ ಮಾಡಲು ಅಭ್ಯಂತರವಿಲ್ಲ. ಆದರೆ, ವ್ಯಕ್ತಿಗತ, ಸಮಾಜದ ಹಿತಕ್ಕೆ ಧಕ್ಕೆಯಾಗುವಂತೆ ವರ್ಣದ ಬಗ್ಗೆ ನಿಂದನೆ ಅವರ ಘನತೆಗೆ ತಕ್ಕದಾಗಿರಲಿಲ್ಲ. ತಮ್ಮ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಮಾಜ ಇಂತಹ ನಡೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ವಕ್ಫ್‌ಬೋರ್ಡ್‌ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಯತ್ನಿಸುತ್ತಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ಇದೇ ರೀತಿ ಮಾತು ಮುಂದುವರಿಸಿದರೆ ಒಕ್ಕಲಿಗರು ಬೀದಿಗಿಳಿಯಬೇಕಾಗುತ್ತದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT