ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಸರ್ಕಾರದಿಂದ ನೀರಿನ ಮೇಲೆ ಗ್ರೀನ್ ಸೆಸ್ ವರದಿ ತಳ್ಳಿಹಾಕಿದ ಡಿಸಿಎಂ ಡಿಕೆ ಶಿವಕುಮಾರ್

"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್‌ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.

ಬೆಂಗಳೂರು: ಪಟ್ಟಣ ಮತ್ತು ನಗರಗಳಲ್ಲಿನ ನೀರಿನ ಬಿಲ್‌ಗಳ ಮೇಲೆ ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಮತ್ತು ಬಿಜೆಪಿ ಈ "ಬೋಗಸ್ ಸುದ್ದಿ"ಯನ್ನು ಹರಡಿದೆ ಎಂದು ಕಿಡಿಕಾರಿದ್ದಾರೆ.

"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್‌ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.

ಪರಿಸರ-ಸೂಕ್ಷ್ಮ ಪಶ್ಚಿಮ ಘಟ್ಟಗಳನ್ನು ಉಳಿಸುವ ಸಲುವಾಗಿ, ಕರ್ನಾಟಕದ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಾರ್ಪಸ್ ನಿಧಿಯನ್ನು ಸಂಗ್ರಹಿಸಲು "2 ಅಥವಾ 3 ರೂ ." ಹಸಿರು ಸೆಸ್ ವಿಧಿಸುವ ಪ್ರಸ್ತಾಪ ಮಾಡಿದೆ ಎಂಬ ವರದಿಗಳಿಗೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.

ಪಶ್ಚಿಮ ಘಟ್ಟಗಳು ಕೇವಲ ಜೈವಿಕ ವೈವಿಧ್ಯತೆಯ ತಾಣವಾಗಿರದೆ ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಇತರ ನದಿಗಳ ಮೂಲವಾಗಿವೆ. ಈ ನದಿಗಳು ರಾಜ್ಯದ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಪೂರೈಸುತ್ತವೆ.

ಈ ಮಧ್ಯೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ನಂತರ ನಿಮಗೆ ಪ್ರತಿಕ್ರಿಯಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT