ಸಾಂದರ್ಭಿಕ ಚಿತ್ರ 
ರಾಜ್ಯ

ಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಧಾರವಾಡ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ಜಾತಿ ಸಂಘರ್ಷ, ಹಲ್ಲೆ, ಹಿಂಸಾಚಾರ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶಿಕ್ಷೆ ವಿಧಿಸಿದ್ದ 101 ಅಪರಾಧಿಗಳಲ್ಲಿ 99 ಮಂದಿಗೆ ಹೈಕೋರ್ಟ್‌ ಧಾರವಾಡ ಪೀಠ ಜಾಮೀನು ನೀಡಿದೆ.

ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಆ ಬಳಿಕ ಅವರೆಲ್ಲಾ ಹೈಕೋರ್ಟ್‌ ಮೊರೆ ಹೋಗಿದ್ದರು.

ಮೇಲ್ಮನವಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ. ಮತ್ತೊಬ್ಬ ಅಪರಾಧಿ ರಾಮಣ್ಣ ಭೋವಿ ಶಿಕ್ಷೆಯ ಆದೇಶ ಪ್ರಕಟವಾದ ನಂತರ ಮೃತಪಟ್ಟಿದ್ದರು. ಜಾಮೀನಿನ ಮೇಲೆ ಅಪರಾಧಿಗಳು ಹೊರ ಬರಲು ಪ್ರತಿಯೊಬ್ಬರಿಗೂ 50 ಸಾವಿರ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಪಡೆಯುವುದು ಕಡ್ಡಾಯವಾಗಿದೆ.

ದಶಕದ (2014ರ ಆಗಸ್ಟ್‌ 28) ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷ, ಹಲ್ಲೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,000 ದಂಡ, ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ 2,000 ದಂಡ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ಕೋರ್ಟ್‌ ಆದೇಶ ನೀಡಿತ್ತು. ಮೂವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರಿಂದ ಜಾತಿನಿಂದನೆ ಕಾಯ್ದೆ ಅನ್ವಯವಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT