ಮದ್ಯ ಮಾರಾಟ ಬಂದ್ (ಸಾಂದರ್ಭಿಕ ಚಿತ್ರ) online desk
ರಾಜ್ಯ

ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ: ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್!

ಯಾವುದೇ ಸಂಘದ ಸದಸ್ಯರು ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಹೆಗ್ಡೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್‌ಗಳ ಒಕ್ಕೂಟ ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಗುರುವಾರ ಹೇಳಿದೆ.

ಭ್ರಷ್ಟಾಚಾರ ಆರೋಪ ಹಾಗೂ ಸರ್ಕಾರದ ವಿರುದ್ಧ ಒಕ್ಕೂಟದ ಬೇಡಿಕೆಗಳ ನಿರ್ಲಕ್ಷ್ಯದ ಆರೋಪ ಹೊರಿಸಿರುವ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರ ನಮ್ಮ ಬೇಡಿಕೆಗಳಿಗೆ ಕಿವಿಗೊಡದ ಕಾರಣ ನವೆಂಬರ್ 20 ರಂದು ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು 120 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ ಹೆಗಡೆ ತಿಳಿಸಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಹೆಗ್ಡೆ, ಅಬಕಾರಿ ಇಲಾಖೆಯಲ್ಲಿನ ಮಿತಿಮೀರಿದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಲು ನವೆಂಬರ್ 20 ರಂದು ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಲಾಗುತ್ತದೆ. ಅದೇ ದಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮದ್ಯ ಮಾರಾಟಗಾರರು ಲಂಚಕ್ಕಾಗಿ ಅಬಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದು, ಅಧಿಕಾರಿಗಳ ಲಂಚದಿಂದ ರಾಜ್ಯದಲ್ಲಿ ನಕಲಿ ಮದ್ಯ ಮಾರಾಟವೂ ಹೆಚ್ಚಿದ್ದು, ಅಬಕಾರಿ ಇಲಾಖೆ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಮತ್ತು ಪೊಲೀಸ್ ಇಲಾಖೆಗಳ ಜತೆಗೂಡಿ ಸಭೆ ನಡೆಸಬೇಕು,’’ ಎಂದು ಹೆಗಡೆ ಆಗ್ರಹಿಸಿದ್ದಾರೆ. ಅಬಕಾರಿ ಇಲಾಖೆಯನ್ನು ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಯಾವುದೇ ಸಂಘದ ಸದಸ್ಯರು ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಹೆಗ್ಡೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಈ ಪತ್ರವನ್ನು ಆರ್‌ಟಿಐ ಕಾರ್ಯಕರ್ತರೊಬ್ಬರು ಬರೆದಿದ್ದಾರೆ. ಅಬಕಾರಿ ಇಲಾಖೆಯಲ್ಲಿನ 700 ಕೋಟಿ ರೂಪಾಯಿ ಭ್ರಷ್ಟಾಚಾರದ ಬಗ್ಗೆ ಸಂಘ ಉಲ್ಲೇಖಿಸಿಲ್ಲ, ಇದನ್ನು ಮಹಾರಾಷ್ಟ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ ಮತ್ತು ಇದು ನಿಜವಲ್ಲ ಎಂದು ಅವರು ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಹೆಗ್ಡೆ, ತಮ್ಮ ಮೂರು ಪ್ರಮುಖ ಬೇಡಿಕೆಗಳನ್ನು ಹೊಂದಿದ್ದು, ಪೊಲೀಸರ ಹಸ್ತಕ್ಷೇಪ ಮತ್ತು ಅನಗತ್ಯ ಪರವಾನಗಿ ಅಮಾನತು, ಚಿಲ್ಲರೆ ಮದ್ಯ ಮಾರಾಟದ ಬಗ್ಗೆ ಸರ್ಕಾರ ಅಬಕಾರಿ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಮತ್ತು ಮದ್ಯ ಸೇವನೆಯಿಂದ ಕನಿಷ್ಠ 20% ಲಾಭವನ್ನು ನೀಡಬೇಕು. ಹೆಚ್ಚುವರಿ ಕೌಂಟರ್‌ಗಳಿಗೆ ಸಿಎಲ್-9 ಪರವಾನಗಿ ಹೊಂದಿರುವ ಆವರಣದಲ್ಲಿ ಮಾತ್ರ ಅನುಮತಿ ನೀಡಬೇಕು ಮತ್ತು ಮದ್ಯ-ಬಿಯರ್ ಪಾರ್ಸೆಲ್‌ಗಳಿಗೆ ಅನುಮತಿ ನೀಡಲು ಕಾನೂನು ತಿದ್ದುಪಡಿ ಮಾಡಬೇಕು ಎಂಬುದು ಒಕ್ಕೂಟ ಮಾಡಿರುವ ಪ್ರಮುಖ ಬೇಡಿಕೆಗಳಾಗಿದೆ ಎಂದು ಅವರು ಹೇಳಿದರು.

ಸಂಘ ಪಟ್ಟಿ ಮಾಡಿರುವ ಇತರ ಬೇಡಿಕೆಗಳು ಇಂತಿವೆ

  • ಪರವಾನಗಿದಾರರ ವಿರುದ್ಧ ಸಾಮಾನ್ಯ ಕಾನೂನು ಕ್ರಮಗಳಿಗೆ ರಾಜಿ ದಂಡವನ್ನು ಕಡಿಮೆ ಮಾಡಬೇಕು ಮತ್ತು ಪರವಾನಗಿ ಇಲ್ಲದ ಮದ್ಯ ಮಾರಾಟಗಾರರಿಗೆ ದಂಡವನ್ನು ಹೆಚ್ಚಿಸಬೇಕು.

  • ಢಾಬಾಗಳು, ಮಾಂಸ ಹೋಟೆಲ್‌ಗಳು, ಗ್ರಾಮಗಳಲ್ಲಿ ಮದ್ಯ ಮಾರಾಟವನ್ನು ನಿಯಂತ್ರಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

  • 2005ರಲ್ಲಿ ತಿದ್ದುಪಡಿ ಮಾಡಿರುವ ಅಬಕಾರಿ ಕಾಯ್ದೆಯ ಸೆಕ್ಷನ್ 29ನ್ನು ಪರಿಶೀಲಿಸಿ ತಿದ್ದುಪಡಿ ತರಬೇಕು.

  • ಎಂಎಸ್ ಐಎಲ್ ಪರವಾನಗಿ ಬಗ್ಗೆ ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು.

  • ಮಿಲಿಟರಿ ಕ್ಯಾಂಟೀನ್ ಅಂಗಡಿಗಳು, ಸುಂಕ ರಹಿತ ಮದ್ಯದ ನೆಪದಲ್ಲಿ ಮಾರಾಟ ಮಾಡುವ ನಕಲಿ ಮದ್ಯ, ಗೋವಾದಿಂದ ಬರುವ ಮದ್ಯ, ನಕಲಿ ಮದ್ಯ ತಯಾರಕರ ಕಳ್ಳಸಾಗಣೆ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT