3 ವರ್ಷದ ಬಾಲಕನ ಶವ ಹೊರತೆಗೆದು ಪರೀಕ್ಷೆ 
ರಾಜ್ಯ

ಧಾರವಾಡ: ಮಗನ ಸಾವಿನ ಬಗ್ಗೆ ಪೋಷಕರ ಸಂಶಯ; ಹೂತಿದ್ದ 3 ವರ್ಷದ ಬಾಲಕನ ಶವ ಹೊರತೆಗೆದು ಪರೀಕ್ಷೆ!

ನವಲಗುಂದ ತಾಲೂಕಿನ ಯಮನ್ನೂರು ಗ್ರಾಮದಲ್ಲಿ ಮೂರು ವರ್ಷದ ಬಾಲಕನ ಮೃತದೇಹವನ್ನು ಆತನ ಸಮಾಧಿಯಿಂದ ಹೊರತೆಗೆಯಲಾಗಿದೆ. ಕೃಷಿ ಉಪಕರಣ ಮೇಲೆ ಬಿದ್ದು ಇತ್ತೀಚೆಗೆ ಬಾಲಕ ಮೃತಪಟ್ಟಿದ್ದನು.

ಧಾರವಾಡ: ಮಗನ ಸಾವಿನ ಸಂಬಂಧ ಪೋಷಕರು ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಹೂತಿದ್ದ 3 ವರ್ಷದ ಬಾಲಕನ ಶವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.

ನವಲಗುಂದ ತಾಲೂಕಿನ ಯಮನ್ನೂರು ಗ್ರಾಮದಲ್ಲಿ ಮೂರು ವರ್ಷದ ಬಾಲಕನ ಮೃತದೇಹವನ್ನು ಆತನ ಸಮಾಧಿಯಿಂದ ಹೊರತೆಗೆಯಲಾಗಿದೆ. ಕೃಷಿ ಉಪಕರಣ ಮೇಲೆ ಬಿದ್ದು ಇತ್ತೀಚೆಗೆ ಬಾಲಕ ಮೃತಪಟ್ಟಿದ್ದನು. ತಮ್ಮ ಮಗನ ಸಾವಿನಲ್ಲಿ ಏನೋ ಪಿತೂರಿ ನಡೆದಿದೆ ಎಂದು ಎಂದು ಪೋಷಕರು ದೂರಿದ್ದಾರೆ. ಭಾರೀ ಗಾತ್ರದ ಕೃಷಿ ಉಪಕರಣದ ತುಂಡು ಮಗುವಿನ ಮೇಲೆ ಬಿದ್ದಾಗ, ಮಗುವಿನ ತಲೆಗೆ ತೀವ್ರವಾದ ಗಾಯಗಳು ಮತ್ತು ಅಪಾರ ರಕ್ತಸ್ರಾವದಿಂದ ನೆರೆ ಮನೆಯಲ್ಲಿ ಮಗು ಸಾವನ್ನಪ್ಪಿತ್ತು.

ಮೃತ ಮಗುವಿನ ಪಾಲಕರಾದ ವೆಂಕಪ್ಪ ಮತ್ತು ಶಾಂತಾ ನೀಡಿದ ದೂರಿನ ಮೇರೆಗೆ ನವಲಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮಣ್ಣೆತ್ತುವ ಯಂತ್ರದ ಸಹಾಯದಿಂದ ಹೊರತೆಗೆದಿದ್ದಾರೆ. ಈ ಸಂದರ್ಭದಲ್ಲಿ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಬಾಲಕ ಯಲ್ಲಪ್ಪ ತಮ್ಮ ನೆರೆಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಕೃಷಿ ಉಪಕರಣಗಳು ಬಿದ್ದು ಸಾವನ್ನಪ್ಪಿದ್ದಾನೆ ಎಂದು ಇಲ್ಲಿಯವರೆಗೆ ನಂಬಲಾಗಿತ್ತು, ಈಗ ಪೋಷಕರು ಅನುಮಾನ ವ್ಯಕ್ತ ಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸತ್ಯಾಂಶ ಹೊರಬೀಳಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬೈಕೋಡ್ ತಿಳಿಸಿದ್ದಾರೆ. ಯಮನ್ನೂರಿನ ನಿವಾಸಿಯೊಬ್ಬರು ಮಾತನಾಡಿ, ಘಟನೆ ನಡೆದ ಕೂಡಲೇ ನೆರೆಮನೆಯ ನಾಗಲಿಂಗ ಗ್ರಾಮ ತೊರೆದ ನಂತರ ಯಲ್ಲಪ್ಪನ ಪೋಷಕರಿಗೆ ಅನುಮಾನ ಬಂದಿದೆ. ಆದರೆ ಕೆಲವರ ಪ್ರಕಾರ ಕೆಲಸಕ್ಕೆ ಹಾಜರಾಗಲು ಗ್ರಾಮವನ್ನು ತೊರೆದಿದ್ದಾರೆ ಎಂದು ಕೆಲವರು ಹೇಳಿದರೆ, ಖಿನ್ನತೆಯಿಂದ ಬಳಲುತ್ತಿದ್ದನಾಗಲಿಂಗ ಸಂಬಂಧಿಕರ ಮನೆಗೆ ಹೋಗಿದ್ದಾರೆ ಎಂದು ಕೆಲವರು ತಿಳಿಸಿದ್ದಾರೆ. ತಮ್ಮ ಮಗುವಿನ ಸಾವಿನ ಹಿಂದಿನ ಕಾರಣವನ್ನು ತಿಳಿದುಕೊಳ್ಳುವುದು ಪೋಷಕರ ಹಕ್ಕು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಈ ವಿಷಯದ ಬಗ್ಗೆ ನಾವು ಹೆಚ್ಚು ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಮೃತರ ಸಂಬಂಧಿಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT