ಡಾ. ಸಿಎನ್ ಮಂಜುನಾಥ್ 
ರಾಜ್ಯ

Covid ಹಗರಣದ ತನಿಖೆಗೆ SIT ರಚನೆ ತೀರ್ಮಾನ: BJP ಸಂಸದ ಡಾ. ಸಿ.ಎನ್ ಮಂಜುನಾಥ್​ಗೂ ಸಂಕಷ್ಟ?

ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ.

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್​ ಮಂಜುನಾಥ್​ ಅವರಿಗೆ ಸಂಕಷ್ಟ ಎದುರಾಗಿದೆ.

ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎನ್ ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದು ಮಂಜುನಾಥ್ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವ ಎಚ್ ಕೆ ಪಾಟೀಲ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT