ಡಾ. ಸಿಎನ್ ಮಂಜುನಾಥ್ 
ರಾಜ್ಯ

Covid ಹಗರಣದ ತನಿಖೆಗೆ SIT ರಚನೆ ತೀರ್ಮಾನ: BJP ಸಂಸದ ಡಾ. ಸಿ.ಎನ್ ಮಂಜುನಾಥ್​ಗೂ ಸಂಕಷ್ಟ?

ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ.

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್​ ಮಂಜುನಾಥ್​ ಅವರಿಗೆ ಸಂಕಷ್ಟ ಎದುರಾಗಿದೆ.

ಕೋವಿಡ್ ಹಗರಣ ಕುರಿತಂತೆ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಎನ್ ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದು ಮಂಜುನಾಥ್ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವ ಎಚ್ ಕೆ ಪಾಟೀಲ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ, ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; '70 ಕೋಟಿ ರೂ. ಅಕ್ರಮ ಹಣ ವರ್ಗಾವಣೆ'

ಅಚ್ಚರಿ: ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಪಾಕಿಸ್ತಾನದ ಪ್ರದೇಶಗಳಿಗೆ ಹಿಂದೂ ಹೆಸರು ಮರು ನಾಮಕರಣ, ಏನಾಗ್ತಿದೆ ಲಾಹೋರ್ ನಲ್ಲಿ?

SCROLL FOR NEXT