ಬಂಧನ (ಸಾಂಕೇತಿಕ ಚಿತ್ರ) online desk
ರಾಜ್ಯ

ಮನೆ ಮುಂದೆ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ವೃದ್ಧ ವ್ಯಕ್ತಿಗೆ ಚೂರಿ ಇರಿತ: ಚಾಲಕ ಬಂಧನ

ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ವಿನಾಯಕ ಲೇಔಟ್ ನಿವಾಸಿ ಹಾಗೂ ನಿವೃತ್ತ ವಕೀಲ ದಳಪತಿ (70) ಎಂದು ಗುರುತಿಸಲಾಗಿದೆ. ದಳಪತಿ ಅವರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಮನೆಯ ಮುಂದೆ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ವೃದ್ಧ ವ್ಯಕ್ತಿಗೆ ಚಾಕು ಇರಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ವಿನಾಯಕ ಲೇಔಟ್ ನಿವಾಸಿ ಹಾಗೂ ನಿವೃತ್ತ ವಕೀಲ ದಳಪತಿ (70) ಎಂದು ಗುರುತಿಸಲಾಗಿದೆ. ದಳಪತಿ ಅವರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಳಿಕ ಪರಾರಿಯಾಗಿದ್ದ ನಾಗರಬಾವಿ 2ನೇ ಹಂತದ ನಿವಾಸಿ ರಾಘವೇಂದ್ರ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತಮ್ಮ ಮನೆಯ ಮುಂದೆ ಕಾರು ನಿಲ್ಲಿದ್ದನ್ನು ದಳಪತಿಯವರು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕುಪಿತಗೊಂಡ ರಾಘವೇಂದ್ರ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಗಾಯಗೊಂಡಿದ್ದ ದಳಪತಿಯನ್ನು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ದಳಪತಿಯವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ