ಬಿ.ವೈ. ವಿಜಯೇಂದ್ರ 
ರಾಜ್ಯ

ವಕ್ಫ್ ವಿವಾದ: ನೈಜ ವರದಿ ಸಂಗ್ರಹಿಸಲು ಬಿಜೆಪಿ ಮೂರು ತಂಡ ರಚನೆ!

'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.

ಬೆಂಗಳೂರು: ಇತ್ತೀಚಿಗೆ ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿ 'ನಮ್ಮ ಭೂಮಿ- ನಮ್ಮ ಹಕ್ಕು' ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.

ಬಿ. ವೈ. ವಿಜಯೇಂದ್ರ ನೇತೃತ್ವದ ಮೊದಲ ತಂಡದಲ್ಲಿ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಭಗವಂತ ಖೂಬಾ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುರುಗೇಶ್ ನಿರಾಣಿ, ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಈರಣ್ಣ ಕಡಾಡಿ, ಹಾಲಪ್ಪ ಆಚಾರ್, ಸುನೀಲ್ ವಲ್ಲಾಪುರೆ ಮತ್ತು ವಕೀಲ ಎಂ.ಜಿ. ಜಿರಲಿ ಇದ್ದಾರೆ. ಈ ತಂಡಕ್ಕೆ ಪಿ. ರಾಜೀವ್ ಸಂಚಾಲಕರಾಗಿದ್ದು, ಅರುಣ್ ಶಹಾಪುರ, ಹರೀಶ್ ಪೂಂಜಾ ಮತ್ತು ಡಾ. ಶೈಲೇಂದ್ರ ಬೆಲ್ಲಾಳ ಸಂಯೋಜಕರಾಗಿದ್ದಾರೆ.

ಈ ತಂಡ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು,ಕೊಪ್ಪಳ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಎರಡನೇ ತಂಡದಲ್ಲಿ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ, ರಾಜೂಗೌಡ, ಎಂಪಿ ರೇಣುಕಾಚಾರ್ಯ, ಎನ್. ಮಹೇಶ್, ದೊಡ್ಡನ ಗೌಡ ಪಾಟೀಲ್, ಭಾರತಿ ಶೆಟ್ಟಿ, ಡಾ. ಬಿ. ಸಿ. ನವೀನ್ ಕುಮಾರ್ ಮತ್ತು ವಕೀಲ ವಸಂತ್ ಕುಮಾರ್ ಇದ್ದಾರೆ. ಇದಕ್ಕೆ ಪ್ರೀತಂಗೌಡ ಸಂಚಾಲಕರಾಗಿದ್ದು, ವಿನಯ್ ಬಿದರೆ, ಡಿ.ಎಸ್. ಅರುಣ್ , ಲಕ್ಷ್ಮಿ ಅಶ್ವಿನಿಗೌಡ ಸಂಯೋಜಕರಾಗಿದ್ದಾರೆ.

ಈ ತಂಡ ಚಾಮರಾಜನಗರ, ಮೈಸೂರು ನಗರ, ಗ್ರಾಂ. ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಎರಡನೇ ತಂಡದಲ್ಲಿ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ, ರಾಜೂಗೌಡ, ಎಂಪಿ ರೇಣುಕಾಚಾರ್ಯ, ಎನ್. ಮಹೇಶ್, ದೊಡ್ಡನ ಗೌಡ ಪಾಟೀಲ್, ಭಾರತಿ ಶೆಟ್ಟಿ, ಡಾ. ಬಿ. ಸಿ. ನವೀನ್ ಕುಮಾರ್ ಮತ್ತು ವಕೀಲ ವಸಂತ್ ಕುಮಾರ್ ಇದ್ದಾರೆ. ಇದಕ್ಕೆ ಪ್ರೀತಂಗೌಡ ಸಂಚಾಲಕರಾಗಿದ್ದು, ವಿನಯ್ ಬಿದರೆ, ಡಿ.ಎಸ್. ಅರುಣ್ , ಲಕ್ಷ್ಮಿ ಅಶ್ವಿನಿಗೌಡ ಸಂಯೋಜಕರಾಗಿದ್ದಾರೆ.

ಈ ತಂಡ ಚಾಮರಾಜನಗರ, ಮೈಸೂರು ನಗರ, ಗ್ರಾಂ. ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT