ನೂತನ ಬಸ್ ಗಳಿಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ 
ರಾಜ್ಯ

NWKRTC: 127 ನೂತನ ಬಸ್ ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ

ಹುಬ್ಬಳ್ಳಿ : ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ನೂತನ 127 ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7-8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, 9 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮುಂದಾಗಿದ್ದು, 1 ಸಾವಿರ ಜನರು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಲ್ಲದೇ ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ. 1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು, ಯುಪಿಐ ಮೂಲಕ ಪ್ರಯಾಣಿಕರು ಟಿಕೆಟ್ ಪಡೆಯಬಹುದಾಗಿದೆ. ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯಡಿ ನೌಕರರು ಹಾಗೂ ಅವರ ಕುಟುಂಬಸ್ಥರು ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಸಾರಿಗೆ ಸಂಸ್ಥೆಗಳಿಗೆ 800 ಬಸ್ ನೀಡುವ ನಿಟ್ಟಿನಲ್ಲಿ ಈಗಾಗಲೇ 584 ಬಸ್‌ಗಳನ್ನು ಒದಗಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಉಳಿದ ಬಸ್‌ಗಳು ಬರಲಿವೆ. ಶಕ್ತಿ ಯೋಜನೆಯು ಭಾರತ ದೇಶದಲ್ಲಿ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ. ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮುಂದುವರೆಯಲಿವೆ. ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿ ರೂ.5 ಲಕ್ಷದ ಬದಲಾಗಿ ರೂ.10 ಲಕ್ಷ ನೀಡಬೇಕು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT