ಸಂಗ್ರಹ ಚಿತ್ರ 
ರಾಜ್ಯ

ಜೋರಾಯ್ತು ಚುನಾವಣಾ ಬೆಟ್ಟಿಂಗ್‌: ಸಂಡೂರಿನಲ್ಲಿ 5 ಎಕರೆ ಕೃಷಿ ಭೂಮಿಯನ್ನೇ ಪಣಕ್ಕಿಟ್ಟ ರೈತ..!

ಚುನಾವಣೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಸೂಕ್ತ ಕಾನೂನು ಇಲ್ಲ. ಸಾರ್ವಜನಿಕರು ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದು ಎಂಬುದನ್ನು ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು.

ಬಳ್ಳಾರಿ: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ನಡೆದು 2 ದಿನಗಳು ಕೆಳೆದಿದ್ದು, ಇದೀಗ ಎಲ್ಲರ ಚಿತ್ತರ ಫಲಿತಾಂಶದತ್ತ ನೆಟ್ಟಿದೆ. ಎಲ್ಲಿ ನೋಡಿದರೂ ಯಾರು ಗೆಲ್ತಾರೆ? ಯಾರು ಸೋಲ್ತಾರೆ? ಎಂಬ ಮಾತುಗಳು ಕೇಳಿ ಬರುತ್ತಿವೆ. ಗೆಲುವು, ಸೋಲಿನ ಬಗ್ಗೆ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಆದರೆ, ಮತ್ತೆ ಕೆಲವರಂತೂ ಈ ಬಾರಿ ತನ್ನ ನೆಚ್ಚಿನ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂಬ ಬಲವಾದ ವಿಶ್ವಾಸದಲ್ಲಿದ್ದರೆ, ಉಳಿದವರು ಬೆಟ್ಟಿಂಗ್ ಕಟ್ಟಲು ಶುರು ಮಾಡಿದ್ದಾರೆ.

ಸಂಡೂರಿನ ರೈತನೊಬ್ಬ ಒಂದು ಹೆಜ್ಜೆ ಮುಂದೆ ಹೋಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರ ಗೆಲುವು ಶತಃಸಿದ್ಧ. ನಾನು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಅನುಯಾಯಿಯಾಗಿದ್ದು, ಈ ಬಾರಿ ನನ್ನ ಇಡೀ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ. ಅನ್ನಪೂರ್ಣ ಅವರು ಗೆಲ್ಲುವ ವಿಶ್ವಾಸವಿದೆ. ಆದರೆ, ನನ್ನ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ. ಯಾರಾದರೂ ಜೂಜು ಕಟ್ಟುವುದಿದ್ದರೆ ಕಟ್ಟಲಿ. ಅದಕ್ಕೆ ನಾನು ಆಹ್ವಾನ ನೀಡುತ್ತೇನೆ. ಗೆದ್ದರೆ ನನ್ನ 5 ಎಕರೆ ಕೃಷಿ ಭೂಮಿ ನೀಡಲು ನಾನು ಸಿದ್ಧನಿದ್ದೇನೆಂದು ಹೇಳಿದ್ದಾರೆ.

ಉಪಚುನಾವಣೆ ಕುರಿತು ಬೆಟ್ಟಿಂಗ್ ಭರಾಟೆ ಜೋರಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷ್ಕ ಶ್ರೀನಿವಾಸ್ ರೆಡ್ಡಿಯವರು, ಬೆಟ್ಟಿಂಗ್ ಅಕ್ರಮವಾಗಿದ್ದರೂ, ಚುನಾವಣಾ ಸಂದರ್ಭದಲ್ಲಿ ಇದು ಸಾಮಾನ್ಯವಾಗಿರುವುದು ದುರಾದೃಷ್ಟಕರ ಸಂಗತಿ. ಯಾವುದೇ ರೀತಿಯ ಬೆಟ್ಟಿಂಗ್ ಸಮಾಜಕ್ಕೆ ಒಳ್ಳೆಯದಲ್ಲ. ಚುನಾವಣೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಸೂಕ್ತ ಕಾನೂನು ಇಲ್ಲ. ಸಾರ್ವಜನಿಕರು ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದು ಎಂಬುದನ್ನು ಅರ್ಥಮಾಡಿಕೊಂಡು ಅದರಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಉಪಚುನಾವಣೆಯ ಫಲಿತಾಂಶವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ನವೆಂಬರ್ 23 ರಂದು ಪ್ರಕಟಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT