ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನ ದಯನೀಯ ಸ್ಥಿತಿ 
ರಾಜ್ಯ

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ

ಕಾಲೇಜು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಹಲವು ಸಮಸ್ಯೆಗಳಿವೆ ಎಂದು ಕೆಲ ವಿದ್ಯಾರ್ಥಿನಿಯರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತರು, ವಿವಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡರು.

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಗುರುವಾರ ದಿಢೀರ್‌ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಇರುವ ಕುಂದುಕೊರತೆಗಳನ್ನು ಪರಿಶೀಲಿಸಿ, ಶೀಘ್ರಗತಿಯಲ್ಲಿ ಪರಿಹರಿಸುವಂತೆ ಕುಲಪತಿ, ಉನ್ನತ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು.

ಕಾಲೇಜು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಹಲವು ಸಮಸ್ಯೆಗಳಿವೆ ಎಂದು ಕೆಲ ವಿದ್ಯಾರ್ಥಿನಿಯರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತರು, ವಿವಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡರು.

ಇಬ್ಬರೂ ಉಪ ಲೋಕಾಯುಕ್ತರು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ಹಾಗೂ ವಿಜ್ಞಾನ ವಿಭಾಗದ ಕಾಲೇಜುಗಳಿಗೆ ಮೊದಲು ಭೇಟಿ ನೀಡಿದರು.

ಎರಡೂ ಕಾಲೇಜುಗಳ ಕಟ್ಟಡಗಳು ಹಳೆಯದಾಗಿದ್ದು, ಕೆಲವೆಡೆ ಶಿಥಿಲವಾಗಿವೆ. ಬಣ್ಣಗಳು ಮಾಸಿರುವುದು, ಕಿಟಕಿ–ಬಾಗಿಲುಗಳು ಹಾಳಾಗಿರುವುದು, ಗೋಡೆಗಳಲ್ಲಿ ನೀರು ಸೋರುತ್ತಿರುವುದು ಹಾಗೂ ಗೋಡೆಗಳ ಮೇಲೆ ಗೀಚುಬರಹ ಇರುವುದನ್ನು ಗಮನಿಸಿದರು.

ವಿವಿಯ ಶೌಚಾಲಯಗಳು ದುರ್ವಾಸನೆ ಬೀರುತ್ತಿದ್ದು, ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸದೇ ಇರುವುದು, ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟು ಕೊಠಡಿಗಳು, ಶೌಚಾಲಯಗಳು ಮತ್ತು ಸ್ನಾನಗೃಹಗಳು ಇಲ್ಲದೇ ಇರುವುದು. ವಿದ್ಯಾರ್ಥಿಗಳಿಗೆ ಸರ್ಕಾರ ಸೂಚಿಸಿದಂತೆ ನಿಯಮಿತ ಮಧ್ಯಂತರದಲ್ಲಿ ಸಿಹಿತಿಂಡಿಗಳು, ಮಾಂಸಾಹಾರಿ ಆಹಾರಗಳು ಮತ್ತು ಮೊಟ್ಟೆಗಳನ್ನು ನೀಡದೇ ಇರುವುದು, ಹಾಸಿಗೆಗಳು, ದಿಂಬುಗಳು ಮತ್ತು ಬೆಡ್‌ಸ್ಪ್ರೆಡ್‌ ಗಳನ್ನು ಒದಗಿಸದೇ ಇರುವುದು ಕಂಡು ಬಂದಿತು. ಇಲ್ಲದೆ, ಹಾಸ್ಟೆಲ್ ನಲ್ಲಿ ವಿದ್ಯುತ್ ಸಮಸ್ಯೆ, ಕುಡಿಯುವ ನೀರುವ ಪೂರೈಕೆಯಲ್ಲಿ ಕೊರತೆಯಾಗುತ್ತಿರುವುದೂ ಕಂಡು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತರು ಇವುಗಳನ್ನು ಶೀಘ್ರವೇ ಸರಿಪಡಿಸಬೇಕು ಎಂದು ಸಂಬಂಧಿತರಿಗೆ ಸೂಚಿಸಿದರು. ಈ ಅವ್ಯವಸ್ಥೆಗಳ ಬಗ್ಗೆ ತನಿಖೆ ನಡೆಸಿ, ವರದಿ ನೀಡಿ ಎಂದು ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್‌ಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್‌ಗೆ ಗಾಯ; ವೀಲ್‌ಚೇರ್‌ನಲ್ಲಿ ಸ್ಥಳಾಂತರ, Video!

ಜುಬೀನ್ ಗರ್ಗ್ ಸಾವಿನ ಪ್ರಕರಣ: ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿ ಬಂಧಿಸಿದ SIT

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

SCROLL FOR NEXT