ಸಾಂದರ್ಭಿಕ ಚಿತ್ರ 
ರಾಜ್ಯ

Bengaluru Murder: ಮೊಬೈಲ್ ವಿಚಾರಕ್ಕೆ ತಂದೆಯಿಂದಲೇ 14 ವರ್ಷದ ಮಗನ ಕೊಲೆ!

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಕಾಶಿ ನಗರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಬಾಲಕನನ್ನು 14 ವರ್ಷದ ತೇಜಸ್ ಎಂದು ಗುರುತಿಸಲಾಗಿದ್ದು, ಹತ್ಯೆ ಮಾಡಿದ ತಂದೆಯನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಂದೆಯೋರ್ವ ತನ್ನ 14 ವರ್ಷದ ಮಗನನ್ನೇ ಕೊಂದು ಹಾಕಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಕಾಶಿ ನಗರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಬಾಲಕನನ್ನು 14 ವರ್ಷದ ತೇಜಸ್ ಎಂದು ಗುರುತಿಸಲಾಗಿದ್ದು, ಹತ್ಯೆ ಮಾಡಿದ ತಂದೆಯನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ.

ಮೊಬೈಲ್ ವಿಚಾರಕ್ಕೆ ಜಗಳ

ಮೂಲಗಳ ಪ್ರಕಾರ, ತೇಜಸ್ ಮತ್ತು ರವಿಕುಮಾರ್ ನಡುವೆ ಮೊಬೈಲ್ ವಿಚಾರಕ್ಕೆ ಜಗಳವಾಗಿದ್ದು, ಮೊಬೈಲ್ ಕೊಡಿಸುವಂತೆ ತೇಜಸ್ ಹಠ ಮಾಡಿದ ಎಂದು ಕೋಪಗೊಂಡ ತಂದೆ ರವಿಕುಮಾರ್ ಆತನಿಗೆ ಮನಸೋ ಇಚ್ಛ ಥಳಿಸಿದ್ದಾನೆ. ಸರಿಯಾಗಿ ಓದಲು ಆಗಲ್ಲ, ಶಾಲೆಗೆ ಹೊಗಲ್ಲ ಮೊಬೈಲ್ ಅಂತ ಗಲಾಟೆ ಶುರು ಮಾಡಿದ್ದಾನೆ.

ಇದಾದ ಬಳಿಕ ಗಲಾಟೆ ವಿಕೋಪಕ್ಕೆ ತೆರಳಿದ್ದು, ಕುಡಿದ ಅಮಲಿನಲ್ಲಿದ್ದ ರವಿಕುಮಾರ್ ಮಗನನ್ನು ಗೋಡೆಗೆ ತಳ್ಳಿದ್ದಾನೆ. ಈ ವೇಳೆ ಮಗ ತೇಜಸ್‌ಗೆ ಬಲವಾಗಿ ಪೆಟ್ಟಾಗಿದೆ. ಅದಾದ ಬಳಿಕ ಪೋಷಕರು ಮಗನನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ತೇಜಸ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಪೊಲೀಸರು ಭೇಟಿ ನೀಡಿ ಘಟನಾ ಸಂಬಂಧ ಪರಿಶೀಲನೆ ನಡೆಸಿದ್ದಾರೆ. ರವಿಕುಮಾರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT