ಜಮೀರ್ ಅಹ್ಮದ್ ಖಾನ್ 
ರಾಜ್ಯ

ನಾನು ಮಠದ ಹುಡುಗ, ಆದಿ ಚುಂಚನಗಿರಿ ಶ್ರೀ ಮಡಿಲಲ್ಲಿ ಬೆಳೆದವ: ಸಚಿವ ಜಮೀರ್ ಅಹ್ಮದ್ ಖಾನ್ | Video

ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ.

ಮಂಗಳೂರು: ನಾನು ಮಠದ ಹುಡುಗ, ಆದಿಚುಂಚನಗಿರಿ ಮಠದಲ್ಲಿ ಬೆಳೆದಿದ್ದು. ನಾನು ಜೆಡಿಎಸ್‌ಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ನೋಟಿಎಸ್ ಬಂದದ್ದು ನನಗೆ ಗೊತ್ತಿಲ್ಲ. ಆದರೆ, ನೋಟಿಸ್ ಕೊಡೋದು ಸಾಮಾನ್ಯ. ಇಡಿಯವರು ಎಸಿಬಿಗೆ ಫಾರ್ವರ್ಡ್ ಮಾಡಿದ್ದಾರೆ, ಕೇಸ್ ಅಲ್ಲಿಂದ ಲೋಕಾಯುಕ್ತಗೆ ಬಂದಿದೆ. ನೋಟಿಸ್ ಬಂದ ಮೇಲೆ ವಿಚಾರಣೆ ಹೋಗಲೇಬೇಕು ಎಂದು ಹೇಳಿದರು.

ಕರಿಯಾ ನಿಂದನೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಎಂದು ಹೇಳಿಲ್ಲ, ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ಓಟ್ ಬೇಡ ಎಂದು ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ? ಇದು ಎಷ್ಟು ಸರಿ ಎಂದು ಕೇಳಿದ್ದೆ ಎಂದು ತಿಳಿಸಿದರು.

ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್‌ ಮಾಡುವರು ಅಂತಾ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ? ಹೌದು ಸ್ವಾಮಿ ನಾವು ಬಡವರು ಅವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ‌ನಂದು, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದರು.

ಇದೇ ವೇಳೆ ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ ಎಂದ ಜಮೀರ್ ಅಹ್ಮದ್ ಖಾನ್ ಅವರು, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತಿದ್ದೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT