ಮಹದೇವಪುರ ವಲಯದಲ್ಲಿ ಪರಿಶೀಲನೆ ನಡೆಸುತ್ತಿರುವ ಬಿಬಿಎಂಪಿ ಆಯುಕ್ತ. 
ರಾಜ್ಯ

BBMP: ಮಹದೇವಪುರ ವಲಯದಲ್ಲಿ ಅತಿಕ್ರಮಣ ಗುರುತಿಸಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸೂಚನೆ

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಡಿ ಮಹದೇವಪುರ ವಲಯದ ವಿವಿಧೆಡೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆರೆ ಒತ್ತುವರಿ ಜಾಗ ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ಮಹದೇವಪುರ ವಲಯದ ಕೆರೆ, ರಾಜಕಾಲುವೆ, ಚರಂಡಿಗಳ ಒತ್ತುವರಿ ಗುರುತಿಸಿ, ಶೀಘ್ರಗತಿಯಲ್ಲಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸೂಚನೆ ನೀಡಿದರು.

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಡಿ ಮಹದೇವಪುರ ವಲಯದ ವಿವಿಧೆಡೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆರೆ ಒತ್ತುವರಿ ಜಾಗ ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಆರ್ ಪುರದ ವೆಂಗಯ್ಯ ಕೆರೆಯಲ್ಲಿ 8 ಕೋಟಿ ರೂ.ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ನಡೆದಿದೆ. ಅಲ್ಲದೆ, ಬೇಲಿ ಅಳವಡಿಕೆ, ಒಳದಾರಿಗಳನ್ನು ಸರಿಪಡಿಸುವುದು, ಡೈವರ್ಶನ್ ಲೈನ್‌ಗಳು ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೊಳಚೆ ನೀರು ಕೆರೆಗೆ ಹರಿದು ಹೋಗುವುದನ್ನು ತಡೆಯಲು ಪಾಲಿಕೆ ವತಿಯಿಂದ 15 ಎಂಎಲ್ ಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಲಾಗುತ್ತಿದೆ. ಜಲಮಂಡಳಿಯಿಂದ ಈಗಾಗಲೇ 10 ಎಂಎಲ್‌ಡಿ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಆಯುಕ್ತರಿಗೆ ಮಾಹಿತಿ ನೀಡಿದರು.

ಇದೇ ವೇಳೆ ಮಳೆಗಾಲದಲ್ಲಿ ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ ನೀರು ನಿಲ್ಲುತ್ತಿರುವುದನ್ನು ತಿಳಿಸಿದ ಅವರು, ಪ್ರವಾಹ ತಡೆಗಟ್ಟಲು 750 ಮೀಟರ್ ಉದ್ದದ ರಸ್ತೆಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅದರಂತೆ ಈ ರಸ್ತೆಯಲ್ಲಿ ಹಾದು ಹೋಗುವ ರಾಜಕಾಲುವೆಯ ಎರಡೂ ಬದಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಉಳಿದ ಜಾಗದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಾಹಿತಿ ಪಡೆದ ಆಯುಕ್ತರು, ಸಕ್ರಾ ಆಸ್ಪತ್ರೆಯಿಂದ ಇಕೋ ಸ್ಪೇಸ್ ವರೆಗಿನ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸುಸ್ತಿದಾರರ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ವಸೂಲಿಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT