ಸಿದ್ದರಾಮಯ್ಯ  
ರಾಜ್ಯ

ಸಮಾಜವಾದಿ ಎಂದು ಹೇಳಿಕೊಂಡು ಮಜಾವಾದಿ ಆಗಿರುವ ಸಿದ್ದರಾಮಯ್ಯ: ವಿಡಿಯೊ ತೋರಿಸಿ ಜೆಡಿಎಸ್ ಟೀಕೆ

ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲು ಕೈಲಾಗದ ಸಿಎಂ ಸಿದ್ದರಾಮಯ್ಯ, ವಿಧಾನಸೌಧದಲ್ಲಿರುವ ಅವರ 323ನೇ ಕೊಠಡಿ ನವೀಕರಣಕ್ಕೆ ಕೋಟಿ ಕೋಟಿ ದುಂದು ವೆಚ್ಚ ಮಾಡಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರದಲ್ಲಿ "ಸಿದ್ಧ" ಹಸ್ತರಾದ ಸಿಎಂ ಸಿದ್ದರಾಮಯ್ಯನವರು ಅಹಿಂದ ವೇಷತೊಟ್ಟು ರಾಜ್ಯದ ಜನರಿಗೆ ವಂಚಿಸುತ್ತಲೇ ಇದ್ದಾರೆ ಎಂದು ಜಾತ್ಯತೀತ ಜನತಾದಳ ಮುಖ್ಯಮಂತ್ರಿಗಳ ಕಚೇರಿಯ ವಿಡಿಯೊ ಬಿಡುಗಡೆ ಮಾಡಿ ಆರೋಪಿಸಿದೆ.

ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲು ಕೈಲಾಗದ ಸಿಎಂ ಸಿದ್ದರಾಮಯ್ಯ, ವಿಧಾನಸೌಧದಲ್ಲಿರುವ ಅವರ 323ನೇ ಕೊಠಡಿ ನವೀಕರಣಕ್ಕೆ ಕೋಟಿ ಕೋಟಿ ದುಂದು ವೆಚ್ಚ ಮಾಡಿದ್ದಾರೆ. ಸರಳತೆ, ಸಮಾಜವಾದ ಎನ್ನುತ್ತಲೇ ಐಷಾರಾಮಿ ಜೀವನ ನಡೆಸುವುದು ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಕರಗತವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ದುಂದುವೆಚ್ಚ ಅಗತ್ಯವೇನಿದೆ?: ಸಮಾಜವಾದಿ, ಸರಳ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು 2.5 ಕೋಟಿಗೂ ಹೆಚ್ಚು ದುಂದುವೆಚ್ಚ ಮಾಡಿ ಮುಖ್ಯಮಂತ್ರಿ ಕಚೇರಿಯನ್ನು ಕಾರ್ಪೊರೇಟ್‌ ಶೈಲಿಯಲ್ಲಿ ನವೀಕರಿಸಿ, ಕಾರ್ಪೊರೇಟ್‌ ಸಿಎಂ ಆಗಿ ಬದಲಾಗಿದ್ದಾರೆ.

ಸಮಾಜವಾದಿ ಎಂದು ಬಿಂಬಿಸಿಕೊಂಡು ಜನರ ತೆರಿಗೆ ಹಣದಲ್ಲಿ ಇಷ್ಟೊಂದು ಐಷಾರಾಮಿ ನವೀಕರಣ ಮಾಡುವ ಅಗತ್ಯವೇನಿದೆ, ಇದಕ್ಕೆ ನಿಮ್ಮ ಆತ್ಮಸಾಕ್ಷಿ ಏನು ಹೇಳುತ್ತದೆ ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT