ತಿಮ್ಮಸಂದ್ರ ಗ್ರಾಮದಲ್ಲಿ ಜಮೀನು ವಿಚಾರವಾಗಿ ಪರಿಸ್ಥಿತಿ ಉದ್ವಿಗ್ನ 
ರಾಜ್ಯ

ಚಿಕ್ಕಬಳ್ಳಾಪುರ: ತಿಮ್ಮಸಂದ್ರದಲ್ಲಿ ಜಮೀನು ವಿಚಾರವಾಗಿ ಜಟಾಪಟಿ; ಪರಿಸ್ಥಿತಿ ಉದ್ವಿಗ್ನ

ದಲಿತ ಕುಟುಂಬದ ಸದಸ್ಯರು ತುಂಡು ಜಮೀನು ತಮಗೆ ಸೇರಿದ್ದು, ಹಲವು ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿದೆ ಎಂದು ಪ್ರತಿಪಾದಿಸಿದರೆ, ಇದು ಮಸೀದಿಯ ಒಡೆತನದಲ್ಲಿದೆ ಎಂದು ಮಸೀದಿಯ ಪ್ರತಿನಿಧಿಗಳು ವಾದಿಸಿದರು.

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಗುರುವಾರ ದಲಿತ ಕುಟುಂಬ ಹಾಗೂ ಸ್ಥಳೀಯ ಜಾಮಿಯಾ ಮಸೀದಿ ಸದಸ್ಯರ ನಡುವೆ ಜಮೀನಿನ ವಿಚಾರವಾಗಿ ವಾಗ್ವಾದ ನಡೆದಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ದಲಿತ ಕುಟುಂಬದ ಸದಸ್ಯರು ತುಂಡು ಜಮೀನು ತಮಗೆ ಸೇರಿದ್ದು, ಹಲವು ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿದೆ ಎಂದು ಪ್ರತಿಪಾದಿಸಿದರೆ, ಇದು ಮಸೀದಿಯ ಒಡೆತನದಲ್ಲಿದೆ ಎಂದು ಮಸೀದಿಯ ಪ್ರತಿನಿಧಿಗಳು ವಾದಿಸಿದರು. ಪೊಲೀಸರು ಗ್ರಾಮಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನೆ ಗುರುವಾರ ನಡೆದಿದ್ದರೂ ಶುಕ್ರವಾರ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಜಮೀನಿನ ವಿವಾದವು 2016 ರಿಂದ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಕ್ಫ್ ಸಮಸ್ಯೆ ರೈತರ ಆತಂಕಕ್ಕೆ ಕಾರಣವಾಗಿದೆ. ರೈತರ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರಕಾರ ಕಂದಾಯ ಅಧಿಕಾರಿಗಳಿಗೆ ವಕ್ಫ್ ಆಸ್ತಿ ಎಂದು ನಮೂದಿಸಿರುವಂತೆ ಸೂಚನೆ ನೀಡಿದೆ ಎಂದು ಆರೋಪಿಸಿದರು.

ಕಂದಾಯ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದನ್ನು ಮುಂದುವರಿಸಿದರೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಪೊಲೀಸ್ ಮೂಲಗಳ ಪ್ರಕಾರ, ಮಸೀದಿಯ ಪ್ರತಿನಿಧಿಗಳ ದೂರಿನ ಮೇರೆಗೆ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!