ಬಿಬಿಎಂಪಿ ಕಚೇರಿ 
ರಾಜ್ಯ

BBMP: 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಶನಿವಾರ ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT