ಡಿಕೆ.ಶಿವಕುಮಾರ್. 
ರಾಜ್ಯ

ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಬೆಂಗಳೂರು: ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ಜಯನಗರ ನಿವಾಸಿಗಳು ಸಿಡಿದೆದ್ದಿದ್ದು, “ನನ್ನ ತೆರಿಗೆ ನನ್ನ ಹಕ್ಕು” ಎಂಬ ಘೋಷಣೆಯಡಿ ಹೋರಾಟಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಜಯನಗರ ಶಾಸಕ ರಾಮಮೂರ್ತಿ ಅವರು, ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಸರ್ಕಾರ ತಲಾ 10 ಕೋಟಿ ರೂ.ಯಂತೆ ಒಟ್ಟು 270 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಡಿಸಿಎಂ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಜಯನಗರ ಕ್ಷೇತ್ರವನ್ನು ಕೈಬಿಟ್ಟಿದ್ದಾರೆಂದು ಆರೋಪಿಸಿದ್ದಾರೆ.

ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್‌ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!