ಡಿಕೆ.ಶಿವಕುಮಾರ್. 
ರಾಜ್ಯ

ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಬೆಂಗಳೂರು: ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ಜಯನಗರ ನಿವಾಸಿಗಳು ಸಿಡಿದೆದ್ದಿದ್ದು, “ನನ್ನ ತೆರಿಗೆ ನನ್ನ ಹಕ್ಕು” ಎಂಬ ಘೋಷಣೆಯಡಿ ಹೋರಾಟಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಜಯನಗರ ಶಾಸಕ ರಾಮಮೂರ್ತಿ ಅವರು, ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಸರ್ಕಾರ ತಲಾ 10 ಕೋಟಿ ರೂ.ಯಂತೆ ಒಟ್ಟು 270 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಡಿಸಿಎಂ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಜಯನಗರ ಕ್ಷೇತ್ರವನ್ನು ಕೈಬಿಟ್ಟಿದ್ದಾರೆಂದು ಆರೋಪಿಸಿದ್ದಾರೆ.

ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್‌ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT