ಹೊತ್ತಿ ಉರಿದ ವಿಂಟೇಜ್ ಕಾರು  
ರಾಜ್ಯ

ಹಂಪಿ: ಪ್ರವಾಸಕ್ಕೆ ಹೊರಟಿದ್ದ ವಿಂಟೇಜ್ ಕಾರು ಮಾರ್ಗ ಮಧ್ಯೆ ಹೇಗೆ ಹೊತ್ತಿ ಉರಿಯಿತು ನೋಡಿ...

ಬೆಂಕಿಗೆ ಆಹುತಿಯಾದ ಕಾರು ಹಿಂದೆ ಇತ್ತು. ರಾಯರಕೆರೆ ಸಮೀಪಕ್ಕೆ ಬಂದಾಗ ಬೆಳಗ್ಗೆ 9 ಗಂಟೆ ವೇಳೆಗೆ ಕಾರಿಗೆ ಒಮ್ಮಿಂದೊಮ್ಮೆಲೆ ಬೆಂಕಿ ಹತ್ತಿಕೊಂಡಿತು.

ವಿಜಯನಗರ: ವಿಂಟೇಜ್ ಕಾರುಗಳ ಪ್ರವಾಸದಲ್ಲಿ ಹೊರಟಿದ್ದ ಕಾರಿಗೆ ಹೊಸಪೇಟೆಯ ಹಂಪಿ ಸಮೀಪ ರಾಯರಕೆರೆ ಎಂಬಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣವಾಗಿ ಭಸ್ಮವಾಗಿದೆ.

ನಿನ್ನೆ ಹಂಪಿ, ಅಂಜನಾದ್ರಿ, ತುಂಗಭದ್ರಾ ಅಣೆಕಟ್ಟು ಪ್ರದೇಶಗಳಿಗೆ ತೆರಳಿದ್ದ ಭಾರತದ 20 ಕಾರುಗಳಲ್ಲಿ ಈ ಕಾರು ಸಹ ಸೇರಿತ್ತು. ಎಕ್ಸ್ ಪ್ಲೋರ್ ಕರ್ನಾಟಕ ಹಿಸ್ಟೋರಿಕ್ ಡ್ರೈವ್ 2024 ಹೆಸರಿನಲ್ಲಿ ವಿಂಟೇಜ್ ಕಾರುಗಳ ಪ್ರವಾಸವಾಗಿದ್ದು, ಕಮಲಾಪುರದ ಇವಾಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ತಂಗಿದ್ದ ಈ ಕಾರುಗಳು ವಿದೇಶದ 20 ಕಾರುಗಳ ಜತೆ ಚಿಕ್ಕಮಗಳೂರಿನತ್ತ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

ಬೆಂಕಿಗೆ ಆಹುತಿಯಾದ ಕಾರು ಹಿಂದೆ ಇತ್ತು. ರಾಯರಕೆರೆ ಸಮೀಪಕ್ಕೆ ಬಂದಾಗ ಬೆಳಗ್ಗೆ 9 ಗಂಟೆ ವೇಳೆಗೆ ಕಾರಿಗೆ ಒಮ್ಮಿಂದೊಮ್ಮೆಲೆ ಬೆಂಕಿ ಹತ್ತಿಕೊಂಡಿತು. ಕಾರಲ್ಲಿದ್ದವರು ತಕ್ಷಣ ಕಾರು ನಿಲ್ಲಿಸಿ ಇಳಿದ ಕಾರಣ ಏನೂ ಅಪಾಯವಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲಿ ಕಾರು ಬಹುತೇಕ ಭಸ್ಮವಾಗಿತ್ತು.

ಸ್ಥಳಕ್ಕೆ ಶಾಸಕ ಹೆಚ್ ಆರ್ ಗವಿಯಪ್ಪ ಭೇಟಿ ನೀಡಿ ಪರಿಶೀಲಿಸಿದ್ದು ಕಾರಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT