ಘಟಪ್ರಭಾ ನದಿ 
ರಾಜ್ಯ

ಬೆಳಗಾವಿ: ಮೀನು ಹಿಡಿಯುತ್ತಿದ್ದ ವೇಳೆ ತಂದೆ, 2 ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಬೆಳಗಾವಿಯ ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.

ಬೆಳಗಾವಿ: ಮೀನು ಹಿಡಿಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ತಂದೆ ಮತ್ತು ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.

ಬೆಳಗಾವಿಯ ಯಮಕನಮರಡಿ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.

ಮೃತರನ್ನು ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ(45), ಅವರ ಮಕ್ಕಳಾದ ರಮೇಶ(15), ಯಲ್ಲಪ್ಪ(13) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ತಂದೆ ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ‌ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಮೂವರು ನೀರಿನಲ್ಲಿ ಮುಳುಗಿರುವ ಕುರಿತು ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ನೀರುಪಾಲಾಗಿರುವ ಮೂವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!