ರಾಜ್ಯ

ಆಘಾತಕಾರಿ ಘಟನೆ: ತಾನು ಕೊಂದಿದ್ದ ಮಹಿಳೆಯ ದೇಹವನ್ನು ಅಂತ್ಯಸಂಸ್ಕಾರ ವೇಳೆ ಹೊತ್ತೊಯ್ಯಲು ಯತ್ನಿಸಿದ ಚಿರತೆ!

ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ.

ನೆಲಮಂಗಲ: ಒಂಟಿಯಾಗಿ ಸಿಗುವವರ ಮೇಲೆ ದಾಳಿ ಮಾಡಿ ಕೊಂದು ತಿನ್ನುವ ಚಿರತೆ ಜನ ಸಮೂಹವನ್ನು ಕಂಡಾಗ ಅಡಗಿ ಕುಳಿತುಕೊಳ್ಳುತ್ತದೆ. ಆದರೆ ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಕಂಬಾಳು ಗೊಲ್ಲರಹಟ್ಟಿ ಗ್ರಾಮದ ಬಳಿ 45 ವರ್ಷದ ಕರಿಯಮ್ಮ ಮೇಲೆ ಚಿರತೆ ದಾಳಿ ಮಾಡಿ ಕೊಂದಿತ್ತು. ರುಂಡವನ್ನು ಚಿರತೆ ತಿಂದಿದ್ದರಿಂದ ಮುಂಡ ಮಾತ್ರ ಪತ್ತೆ ಆಗಿತ್ತು. ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಷ್ಟೇ ಅಲ್ಲದೆ ಚಿರತೆ ದಾಳಿ ಆತಂಕ ಹಿನ್ನೆಲೆಯಲ್ಲಿ ACF,DCF ಸೇರಿದಂತೆ ಲೆಪರ್ಡ್ ಟಾಸ್ಕ್ ಫೋರ್ಸ್ ತಂಡ ಚಿರತೆ ಸಿದ್ದತೆ ನಡೆಸಿದೆ. ಈಗಾಗಲೇ ಗೊಲ್ಲರಹಟ್ಟಿಗೆ ಎಸಿಎಫ್‌ ನಿಜಾಮುದ್ದೀನ್ ಭೇಟಿ ನೀಡಿದ್ದು, ಚಿರತೆಯನ್ನು ಸೆರೆಹಿಡಿಯದೆ ಬಿಡುವುದಿಲ್ಲ ಎಂದು ಹೇಳಿದರು.

ನಿನ್ನೆ ರಾತ್ರಿ ಬೆಂಕಿ ಹಾಕಿ ಮಹಿಳೆಯ ಶವ ಕಾಯುತ್ತಿದ್ದವರಿಗೆ ಚಿರತೆ ಪ್ರತ್ಯಕ್ಷವಾಗಿ ಶಾಕ್ ನೀಡಿತ್ತು. ಪೊಲೀಸ್ ಹಾಗೂ ಸಾರ್ವಜನಿಕರನ್ನೇ ಬೆದರಿಸಿ ಮೃತದೇಹವನ್ನು ಹೊತ್ತೊಯಲು ಚಿರತೆ ಯತ್ನಿಸಿದೆ. ಕೂಡಲೇ ಅಲ್ಲೇ ಇದ್ದ ದೊಣ್ಣೆ, ಮಚ್ಚು ಮತ್ತು ಟಾರ್ಚ್ ಬಳಸಿ ಗ್ರಾಮಸ್ಥರು ಚಿರತೆಯನ್ನು ಓಡಿಸಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರು ಒಂದು ಕಡೆ ಭಯಗೊಂಡಿದ್ದರೆ, ಮತ್ತೊಂದು ಕಡೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನುಷ್ಯರ ಮೇಲೆ ಪ್ರಾಣಿಗಳು ದಾಳಿ ನಡೆಸಿದಾಗ ಮಾತ್ರ ಬರುತ್ತಾರೆ. ಇದುವರೆಗೂ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT