ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ ಚಳಿಗಾಲ ಅಧಿವೇಶನ: ಪ್ರತಿಭಟನೆಗೆ ರೈತರ ಸಜ್ಜು, ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ

ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು.

ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳೆಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ರೈತರು ಸಜ್ಜಾಗಿದ್ದು, ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಅವರು ಭಾನುವಾರ ಹೇಳಿದರು.

ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಮಂಡ್ಯದಿಂದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

1980ರ ದಶಕದಲ್ಲಿ ಕಂಪನ ಉಂಟುಮಾಡಿದ್ದ ಕರ್ನಾಟಕ ರಾಜ್ಯ ರೈತ ಸಂಘ ಇತ್ತೀಚಿನ ವರ್ಷಗಳಲ್ಲಿ ತಾತ್ವಿಕ ಭಿನ್ನಾಪ್ರಾಯದಿಂದ ಹಲವು ಬಣಗಳಾಗಿದ್ದು, ಸಂಘಟನೆಯ ಬಲ ಕುಸಿದಿದೆ. ರೈತ ಸಂಘದ ಏಕೀಕರಣದ ಮೂಲಕ ಎಲ್ಲಾ ಬಣಗಳನ್ನು ಒಂದೇ ವೇದಿಕೆಯಲ್ಲಿ ಕರೆತಂದು ಸಂಘಟಿಸಲಾಗುವುದು. ಇದು ಮಹತ್ತರ ಬೆಳವಣಿಗೆಯಾಗಲಿದೆ ಎಂದು ತಿಳಿಸಿದರು.

ಇದೇ ವೇಳೆ ರೈತರ ಏಳಿಗೆಗಾಗಿ ತಮ್ಮ ಜೀವನವನ್ನಲ್ಲೇ ಮುಡಿಪಾಗಿಟ್ಟ ಪ್ರೊ.ಎಂ.ಡಿ.ನಂಜುನಸ್ವಾಮಿ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಅವರನ್ನು ಸ್ಮರಿಸಿದ ಅವರು, ಅವರ ಸಂಘಟನೆಯ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಲಾಗುವುದು ಎಂದು ಹೇಳಿದರು.

ಡಿ.23ರಂದು ನಡೆಯುವ ಪುಟ್ಟಣ್ಣಯ್ಯನವರ ಜನ್ಮ ದಿನಾಚರಣೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಎಲ್ಲಾ ರೈತ ಸಂಘಟನೆಗಳನ್ನು ಆಹ್ವಾನಿಸಿದ್ದು, ಎಲ್ಲ ರೈತ ಸಂಘಟನೆಗಳು ಒಗ್ಗೂಡಲು ಒಪ್ಪಿಗೆ ನೀಡಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel