ಸಾಂದರ್ಭಿಕ ಚಿತ್ರ 
ರಾಜ್ಯ

CST Mangalore Express ರೈಲಿನಲ್ಲಿ 63 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು; ದಂಗಾದ ಪ್ರಯಾಣಿಕ!

ನವೆಂಬರ್ 16ರಂದು ಇಂದ್ರಾಳಿ ರೈಲು ನಿಲ್ದಾಣಕ್ಕೆ ತೆರಳಿದ್ದೇವು. ಮನೆಗೆ ಹಿಂತಿರುಗಿ ಸಂಜೆ ಸೂಟ್‌ಕೇಸ್‌ಗಳನ್ನು ತೆರೆದಾಗ ಎರಡು ಸೂಟ್‌ಕೇಸ್‌ಗಳಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಉಡುಪಿ: ಮುಂಬೈನಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದು 63 ಲಕ್ಷ ಮೌಲ್ಯದ 900 ಗ್ರಾಂ ಚಿನ್ನಾಭರಣಗಳನ್ನು ಕಳೆದುಕೊಂಡಿದೆ.

ಮುಂಬೈನ ನಿವಾಸಿ ಅವಿನಾಶ್ ಈ ಸಂಬಂಧ ದೂರು ನೀಡಿದ್ದಾರೆ. ನವೆಂಬರ್ 15ರಂದು ತನ್ನ ಕುಟುಂಬದೊಂದಿಗೆ ಮುಂಬೈನಿಂದ ಸಿಎಸ್‌ಟಿ ಮಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12133, ಕೋಚ್ ನಂ ಎಸ್ 3) ನಲ್ಲಿ ಪ್ರಯಾಣಿಸಿದ್ದೇವು. ಬಟ್ಟೆ ಮತ್ತು ಚಿನ್ನಾಭರಣಗಳಿದ್ದ ನಾಲ್ಕು ಸೂಟ್‌ಕೇಸ್‌ಗಳನ್ನು ತೆಗೆದುಕೊಂಡು ಹೋಗಿದ್ದು ಅದನ್ನು ಸೀಟಿನ ಕೆಳಗೆ ಇಟ್ಟಿದ್ದೇವು.

ನವೆಂಬರ್ 16ರಂದು ಇಂದ್ರಾಳಿ ರೈಲು ನಿಲ್ದಾಣಕ್ಕೆ ತೆರಳಿದ್ದೇವು. ಮನೆಗೆ ಹಿಂತಿರುಗಿ ಸಂಜೆ ಸೂಟ್‌ಕೇಸ್‌ಗಳನ್ನು ತೆರೆದಾಗ ಎರಡು ಸೂಟ್‌ಕೇಸ್‌ಗಳಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಪನ್ವೇಲ್ ಮತ್ತು ಕಂಕಾವ್ಲಿ ರೈಲು ನಿಲ್ದಾಣಗಳ ನಡುವೆ ಎಲ್ಲೋ ಕಳ್ಳತನ ನಡೆದಿದೆ ಎಂದು ದೂರುದಾರರು ಶಂಕಿಸಿದ್ದಾರೆ. ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT