ಡಿ.ಕೆ ಶಿವಕುಮಾರ್ 
ರಾಜ್ಯ

ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ.ಕೆ ಶಿವಕುಮಾರ್

ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ.

ಬೆಂಗಳೂರು: ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ, ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ. ಕೆಲವು ಮಾನದಂಡಗಳ ಆಧಾರದ ಮೇಲೆ ಕೆಲವು ಬಿಪಿಎಲ್ ಕಾರ್ಡು ರದ್ದಾಗಿವೆ ಎಂದರು.

1 ಸಾವಿರ ಕೋಟಿ ಎಲ್ಲಿಂದ ಬಂತು? ಶಾಸಕರ ಖರೀದಿಗಾಗಿ 50 ಕೋಟಿಯಿಂದ 100 ಕೋಟಿವರೆಗೂ ಆಮಿಷ ನೀಡಲಾಗುತ್ತಿದೆ ಎಂಬ ವಿಚಾರದ ಬಗ್ಗೆ ಕೇಳಿದಾಗ, "ಬಿಜೆಪಿಯವರು ಮೊದಲು ಯತ್ನಾಳ್ ಅವರ 1000 ಕೋಟಿ ಬಗ್ಗೆ ಉತ್ತರ ನೀಡಲಿ. ಆ ಹಣ ಎಲ್ಲಿಂದ ಬಂತು? ಯಾರು ಕಲೆ ಹಾಕಿ, ಯಾರಿಗೆ ಕೊಟ್ಟರು? ಈ ವಿಚಾರದಲ್ಲಿ ನಮ್ಮನ್ನು ಪ್ರಶ್ನೆ ಮಾಡುವ ಬದಲು ವಿಜಯೇಂದ್ರ ಹಾಗೂ ಅಶೋಕ್, ಎನ್ ಡಿಎ ನಾಯಕರನ್ನು ಪ್ರಶ್ನೆ ಮಾಡಿ. ಅವರು ಎಲ್ಲಾ ವಿಚಾರದಲ್ಲೂ ತನಿಖೆ ಮಾಡುತ್ತಾರಲ್ಲ. ಈ ವಿಚಾರದಲ್ಲಿ ಅವರ ಪಕ್ಷದ ಆಂತರಿಕ ತನಿಖೆ ನಡೆಯಲಿ. ನಮ್ಮ ತನಿಖೆ ನಾವು ಮಾಡುತ್ತೇವೆ. ಮಾಧ್ಯಮಗಳು ಯಾಕೆ ಏಕಪಕ್ಷೀಯವಾಗಿವೆ" ಎಂದು ಕೇಳಿದರು.

ಜಯನಗರ ಶಾಸಕರು ಹೋರಾಟ ನಡೆಸುವ ಬಗ್ಗೆ ಕೇಳಿದಾಗ, "ಅವರು ನೂರು ಸಭೆ ಮಾಡಲಿ. ಅದು ಮಂತ್ರಿಗಳ ವಿಶೇಷ ಅನುದಾನ. ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾದ ಬಳಿಕ ಬೆಂಗಳೂರು ಅಧೋಗತಿಗೆ ಬಂದಿದೆ ಎಂದು ಹೇಳಿದ್ದಾರೆ. ನನ್ನಿಂದ ಬೆಂಗಳೂರು ಹೇಗೆ ಅಧೋಗತಿಗೆ ಬಂದಿದೆ ಎಂದು ಅವರು ವಿವರಣೆ ನೀಡಲಿ. ಆರ್ ಆರ್ ನಗರ, ಪದ್ಮನಾಭನಗರ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರ ಕ್ಷೇತ್ರಕ್ಕೆ ನಾನು ಕೊಟ್ಟಿಲ್ಲವೇ? ನಾನು ಬಂದ ಮೇಲೆ ಯಾವ ರೀತಿ ಅಧೋಗತಿ ಬಂದಿದೆ ಎಂದು ಆ ಕ್ಷೇತ್ರಕ್ಕೆ ಹೋಗಿ ಭೇಟಿ ನೀಡುತ್ತೇನೆ" ಎಂದು ತಿಳಿಸಿದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಮಹಾವಿಕಾಸ್ ಅಗಾಡಿ ಮೈತ್ರಿಕೂಟ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷಕ್ಕೆ ಜನ ಅಭೂತಪೂರ್ವ ಬೆಂಬಲ ನೀಡುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಇದ್ದ ಅನುಮಾನ ಬಗೆಹರಿದಿದೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ"ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT