ಶ್ರವಣ್ ಮತ್ತು ಯೋಗೇಶ್ವರ್ 
ರಾಜ್ಯ

ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?

ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅವರ ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಸಂಕಷ್ಟ ಶುರುವಾಗಿದೆ. ತನ್ನ ಸಹಿ ನಕಲು ಮಾಡಿದ್ದಾರೆಂದು ಆರೋಪಿಸಿ ಪುತ್ರ ಶ್ರವಣ್ ತಂದೆಯ ವಿರುದ್ಧವೇ ದೂರು ದಾಖಲಿಸಿದ್ದಾರೆ.

ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅವರ ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ. ಸಿಪಿ ಯೋಗೇಶ್ವರ ಅವರ ಮೊದಲ ಪತ್ನಿ ಮಂಜುಳಾ ಮತ್ತು ಪುತ್ರ ಶ್ರವಣ್​ ಅವರು ಎರಡೂವರೆ ವರ್ಷದ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿಸಿದ್ದರು. ಈ ಮನೆ ಸಿಪಿ ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದೆ. ಶ್ರವಣ್ ಹಾಗೂ ಆತನ ತಾಯಿ ಮಂಜುಳಾ ಇಬ್ಬರೂ ಸೇರಿ ಮನೆಯನ್ನು ನಿಶಾ ಯೋಗೇಶ್ವರ್ ಗೆ ಉಡುಗೊರೆಯಾಗಿ ನೀಡಿದ್ದರು.

ಅಮ್ಮ ಮತ್ತು ನಾನು ಯಾವುದೇ ತಕರಾರು ಇಲ್ಲದೇ ಮನೆಯನ್ನು ನಿಶಾಗೆ ಗಿಫ್ಟ್ ನೀಡಿದ್ದೇವು. ಅದಾದ ನಂತರ 2024 ಅಕ್ಟೋಬರ್​ ನಲ್ಲಿ ನಮ್ಮ ತಂದೆಯ ಪಿಎ ಮೂಲಕ ನನಗೆ ಒಂದು ಡ್ರಾಪ್ಟ್​​ ಬಂತು. ಅದು ಆ ಮನೆಯ ಭಾಗಕ್ಕೆ ವಿಚಾರಕ್ಕೆ ಸಂಬಂಧಿಸಿದ್ದಾಗಿತ್ತು. ಆ ಮನೆಯ ಭಾಗ ಕೇಳಿ ನಾನೇ ನನ್ನ ತಾಯಿ ಮತ್ತು ಸಹೋದರಿ ನಿಶಾ ವಿರುದ್ಧ ಕೇಸ್​ ಹಾಕುವುದಕ್ಕೆ ಸಂಬಂಧಿಸಿದ್ದಾಗಿತ್ತು. ನಾನು ಯಾವುದೇ ಗಿಫ್ಟ್ ನೀಡಿಲ್ಲ, ಅದರಲ್ಲಿ ನನಗೆ ಪಾಲು ಬೇಕು ಎಂದು ಬರೆಯಲಾಗಿತ್ತು. ಇದಕ್ಕೆ ನಾನು ಒಪ್ಪಿರಲಿಲ್ಲ. ಅಲ್ಲದೇ ತಂದೆಗೂ ಕೂಡ ನನ್ನ ಅನುಮತಿ ಇಲ್ಲ ಎಂದು ಹೇಳಿದ್ದೆ. ಆಗ ತಂದೆ ಯೋಗೇಶ್ವರ್​ ನಾನು ನೋಡಿಕೊಳ್ತೇನೆ ಬಿಡು ಎಂದಿದ್ದರು. ಇದೀಗ ನನ್ನ ತಂದೆಯವರೇ ಆ ಡ್ರಾಪ್ಟ್ ಗೆ ಸಹಿ ಮಾಡಿ ನಾನು ಪಾಲು ಕೇಳಿರುವಂತೆ ಕೇಸ್​ ದಾಖಲಿಸಿದ್ದಾರೆ. ಅಂದರೆ ನನ್ನ ಹೆಸರಿನಲ್ಲಿ ಅಮ್ಮ ಮತ್ತು ಸಹೋದರಿ ವಿರುದ್ಧ ಕೇಸ್​ ದಾಖಲಿಸಿದ್ದಾರೆ. ಇದರ ವಿರುದ್ಧ ನಾನು ಕೋರ್ಟ್ ಮೊರೆ ಹೋಗಿದ್ದೇನೆ. ನಾನು ಯಾವುದೇ ಸಹಿ ಮಾಡಿಲ್ಲ. ಮನೆಯಲ್ಲಿ ಭಾಗವನ್ನೂ ಕೇಳಿಲ್ಲ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

SCROLL FOR NEXT